<p><strong>ಕುಣಿಗಲ್</strong>: ಪಟ್ಟಣದ ಬಿಜಿಎಸ್ ನಗರಕ್ಕೆ ಕಳೆದ ಹದಿನೈದು ದಿನದಿಂದ ಪುರಸಭೆಯಿಂದ ನೊರೆಭರಿತ, ದುರ್ವಾಸನೆಯಿಂದ ಕೂಡಿದ ಕುಡಿಯುವ ನೀರು ಪೂರೈಕೆಯಾಗುತ್ತಿದೆ ಎಂದು ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಬಿಜಿಎಸ್ ನಗರದಲ್ಲಿ ಇನ್ನೂರಕ್ಕೂ ಹೆಚ್ಚು ಮನೆಗಳಿದ್ದು, ಎರಡು ಕೊಳವೆಬಾವಿಗಳಿಂದ ಕುಡಿಯುವ ನೀರು ವಿತರಣೆಯಾಗುತ್ತಿದೆ. ಕೆಲದಿನಗಳಿಂದ ನೊರೆ ಭರಿತ, ದುರ್ವಾಸನೆಯುಕ್ತ ನೀರು ವಿತರಣೆಯಾಗುತ್ತಿದ್ದು, ಕುಡಿಯುಲು ಯೋಗ್ಯವಾಗಿಲ್ಲ. ಹಾಗಾಗಿ ಕುಡಿಯುವ ನೀರಿಗಾಗಿ ಸಮೀಪದ ತೋಟಗಳ ಕೊಳವೆಬಾವಿಗಳಿಗೆ ಹೋಗಬೇಕಾದ ಅನಿವಾರ್ಯವಿದೆ ಎಂದು ದೂರಿದ್ದಾರೆ.</p>.<p>ಕುಲುಷಿತ ನೀರು ವಿತರಣೆ ಜತೆಗೆ ಅಸಮರ್ಪಕ ನೀರಿನ ವಿತರಣೆಯಾಗುತ್ತಿರುವುದರಿಂದ ಹೆಚ್ಚಿನ ಸಮಸ್ಯೆಯಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳಿಗೆ ಮತ್ತು ಜನಪ್ರತಿನಿಧಿಗಳಿಗೆ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರಾದ ಕೆ.ಬಿ.ಕುಮಾರ್, ಗಣೇಶ್, ಕಾಳಮ್ಮ ಲಕ್ಷ್ಮೀರಾಜೇಂದ್ರ ಮತ್ತು ಲಕ್ಷ್ಮಮ್ಮ ದೂರಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-17-41834240</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಣಿಗಲ್</strong>: ಪಟ್ಟಣದ ಬಿಜಿಎಸ್ ನಗರಕ್ಕೆ ಕಳೆದ ಹದಿನೈದು ದಿನದಿಂದ ಪುರಸಭೆಯಿಂದ ನೊರೆಭರಿತ, ದುರ್ವಾಸನೆಯಿಂದ ಕೂಡಿದ ಕುಡಿಯುವ ನೀರು ಪೂರೈಕೆಯಾಗುತ್ತಿದೆ ಎಂದು ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಬಿಜಿಎಸ್ ನಗರದಲ್ಲಿ ಇನ್ನೂರಕ್ಕೂ ಹೆಚ್ಚು ಮನೆಗಳಿದ್ದು, ಎರಡು ಕೊಳವೆಬಾವಿಗಳಿಂದ ಕುಡಿಯುವ ನೀರು ವಿತರಣೆಯಾಗುತ್ತಿದೆ. ಕೆಲದಿನಗಳಿಂದ ನೊರೆ ಭರಿತ, ದುರ್ವಾಸನೆಯುಕ್ತ ನೀರು ವಿತರಣೆಯಾಗುತ್ತಿದ್ದು, ಕುಡಿಯುಲು ಯೋಗ್ಯವಾಗಿಲ್ಲ. ಹಾಗಾಗಿ ಕುಡಿಯುವ ನೀರಿಗಾಗಿ ಸಮೀಪದ ತೋಟಗಳ ಕೊಳವೆಬಾವಿಗಳಿಗೆ ಹೋಗಬೇಕಾದ ಅನಿವಾರ್ಯವಿದೆ ಎಂದು ದೂರಿದ್ದಾರೆ.</p>.<p>ಕುಲುಷಿತ ನೀರು ವಿತರಣೆ ಜತೆಗೆ ಅಸಮರ್ಪಕ ನೀರಿನ ವಿತರಣೆಯಾಗುತ್ತಿರುವುದರಿಂದ ಹೆಚ್ಚಿನ ಸಮಸ್ಯೆಯಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳಿಗೆ ಮತ್ತು ಜನಪ್ರತಿನಿಧಿಗಳಿಗೆ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರಾದ ಕೆ.ಬಿ.ಕುಮಾರ್, ಗಣೇಶ್, ಕಾಳಮ್ಮ ಲಕ್ಷ್ಮೀರಾಜೇಂದ್ರ ಮತ್ತು ಲಕ್ಷ್ಮಮ್ಮ ದೂರಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-17-41834240</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>