ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಎಸ್.ಬಲರಾಂ ಪ್ರತಿಕ್ರಿಯಿಸಿ, ಶಾಸಕರು ಮತ್ತು ಸಂಸದರು ಚುನಾವಣೆ ಪೂರ್ವದಲ್ಲಿ ಅಭಿವೃದ್ಧಿ ಕಾರ್ಯಗಳ ಪೂಜೆ ಮಾಡುತ್ತಾರೆ, ನಂತರ ಸುಮ್ಮನಾಗುತ್ತಾರೆ ಎಂಬುದಕ್ಕೆ ವಿದ್ಯುತ್ ಚಿತಾಗಾರವೇ ಸಾಕ್ಷಿಯಾಗಿದೆ. ವ್ಯವಸ್ಥಿತ ನಿರ್ವಹಣೆಗೆ ಕ್ರಮ ತೆಗೆದುಕೊಳ್ಳುವುದರ ಜತೆಗೆ ಅಗ್ನಿಸ್ಪರ್ಶದ ಮೂಲಕ ಅಂತ್ಯಕ್ರಿಯೆ ನಡೆಸುವ ಸಮುದಾಯದ ಮುಖಂಡರ ಸಭೆ ನಡೆಸಿ ಜಾಗೃತಿ ಮೂಡಿಸಬೇಕಿದೆ ಎಂದರು.