<p><strong>ಕುಣಿಗಲ್:</strong> ತಾಲ್ಲೂಕಿನ ಕಗ್ಗರೆ ಬಳಿ ಶನಿವಾರ ಅಪರಿಚಿತ ವಾಹನ ಡಿಕ್ಕಿ ಹೊಡೆದು ತೀವ್ರವಾಗಿ ಗಾಯಗೊಂಡಿದ್ದ ಗುಳ್ಳೆನರಿಗೆ ಇಲ್ಲಿಯ ಪಶುಪಾಲನಾ ಇಲಾಖೆ ಡಾ.ನವೀನ್ ಸತತ ಐದು ತಾಸು ಶಸ್ತ್ರಚಿಕಿತ್ಸೆ ನಡೆಸಿ, ಪ್ರಾಣ ಉಳಿಸಿದ್ದಾರೆ.</p>.<p>ತೀವ್ರವಾಗಿ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಗುಳ್ಳೆನರಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಪ್ರಾಣಿಪ್ರಿಯ ವೇಣು ಪಟ್ಟಣದ ಪಶುಪಾಲನಾ ಕೇಂದ್ರಕ್ಕೆ ದಾಖಲಿಸಿದ್ದರು.</p>.<p>ಕಾಲು ಮತ್ತು ಬೆನ್ನು ಭಾಗದ ಮೂಳೆಗಳು ಮುರಿದಿದ್ದವು. ಸಾವು, ಬದುಕಿನ ಮಧ್ಯೆ ಹೋರಾಟ ನಡೆಸಿದ್ದ ಗುಳ್ಳೆನರಿಗೆ ಡಾ. ನವೀನ್ ಭಾನುವಾರ ಶಸ್ತ್ರಚಿಕಿತ್ಸೆ ಮಾಡಿದ್ದರು.</p>.<p>ವೈದ್ಯರ ಸಲಹೆ ಮೇರೆಗೆ ರಂಗಸ್ವಾಮಿ ಗುಡ್ಡದ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಗುಳ್ಳೆನರಿಯ ಆರೈಕೆ ಮಾಡುತ್ತಿದ್ದು, ಚೇತರಿಸಿಕೊಂಡಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-17-414328193</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಣಿಗಲ್:</strong> ತಾಲ್ಲೂಕಿನ ಕಗ್ಗರೆ ಬಳಿ ಶನಿವಾರ ಅಪರಿಚಿತ ವಾಹನ ಡಿಕ್ಕಿ ಹೊಡೆದು ತೀವ್ರವಾಗಿ ಗಾಯಗೊಂಡಿದ್ದ ಗುಳ್ಳೆನರಿಗೆ ಇಲ್ಲಿಯ ಪಶುಪಾಲನಾ ಇಲಾಖೆ ಡಾ.ನವೀನ್ ಸತತ ಐದು ತಾಸು ಶಸ್ತ್ರಚಿಕಿತ್ಸೆ ನಡೆಸಿ, ಪ್ರಾಣ ಉಳಿಸಿದ್ದಾರೆ.</p>.<p>ತೀವ್ರವಾಗಿ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಗುಳ್ಳೆನರಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಪ್ರಾಣಿಪ್ರಿಯ ವೇಣು ಪಟ್ಟಣದ ಪಶುಪಾಲನಾ ಕೇಂದ್ರಕ್ಕೆ ದಾಖಲಿಸಿದ್ದರು.</p>.<p>ಕಾಲು ಮತ್ತು ಬೆನ್ನು ಭಾಗದ ಮೂಳೆಗಳು ಮುರಿದಿದ್ದವು. ಸಾವು, ಬದುಕಿನ ಮಧ್ಯೆ ಹೋರಾಟ ನಡೆಸಿದ್ದ ಗುಳ್ಳೆನರಿಗೆ ಡಾ. ನವೀನ್ ಭಾನುವಾರ ಶಸ್ತ್ರಚಿಕಿತ್ಸೆ ಮಾಡಿದ್ದರು.</p>.<p>ವೈದ್ಯರ ಸಲಹೆ ಮೇರೆಗೆ ರಂಗಸ್ವಾಮಿ ಗುಡ್ಡದ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಗುಳ್ಳೆನರಿಯ ಆರೈಕೆ ಮಾಡುತ್ತಿದ್ದು, ಚೇತರಿಸಿಕೊಂಡಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-17-414328193</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>