ಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ.ಶಿವಣ್ಣ ಅವರ ಮಗ ಪ್ರಮೋದ್ ಸಾಫ್ಟ್ವೇರ್ ಎಂಜನಿಯರ್ ಆಗಿದ್ದು, ಅಮೆಜಾನ್ ಉದ್ಯೋಗಿಯಾಗಿದ್ದಾರೆ. ಕೆಲಸಕ್ಕೆ ರಾಜೀನಾಮೆ ನೀಡಿ ಶಿಕ್ಷಣ ಸಂಸ್ಥೆಯೊಂದನ್ನು ಪ್ರಾರಂಭಿಸಿ ದೊಡ್ಡಪ್ಪ ಡಿ.ನಾಗರಾಜಯ್ಯ, ತಂದೆ, ಚಿಕ್ಕಪ್ಪ ಡಿ.ಕೃಷ್ಣಕುಮಾರ್ ಅವರ ರಾಜಕೀಯ ಜೀವನಕ್ಕೆ ಅಡಿಪಾಯ ಹಾಕಿಕೊಟ್ಟ ನಡೆಮಾವಿನಪುರ ಪಂಚಾಯಿತಿಗೆ ಸ್ಪರ್ಧಿಸಿದ್ದಾರೆ. ಮಾಚಿ ಸಚಿವ ಡಿ.ನಾಗರಾಜಯ್ಯ ಶುಕ್ರವಾರ ನಡೆಮಾವಿನಪುರಕ್ಕೆ ತೆರಳಿ ಪ್ರಚಾರ ನಡೆಸಿದ್ದಾರೆ.