<p><strong>ಕುಣಿಗಲ್</strong>: ತಾಲ್ಲೂಕಿನಲ್ಲಿ ಕಳೆದ ಎರಡು ವರ್ಷದಿಂದ ನರೇಗಾ ಯೋಜನೆಯಲ್ಲಿ ₹100 ಕೋಟಿಗೂ ಹೆಚ್ಚು ಅಕ್ರಮವಾಗಿದೆ. ಜಿಲ್ಲಾ ಪಂಚಾಯಿತಿ, ಒಂಬಡ್ಸ್ಮೆನ್ಗೆ ದೂರು ನೀಡಿದ್ದರೂ ಸಮರ್ಪಕ ತನಿಖೆ ನಡೆಸಲು ವಿಫಲರಾಗಿದ್ದಾರೆ. ಹೀಗಾಗಿ ಕೇಂದ್ರ ಸಚಿವರಿಗೆ ದೂರು ನೀಡಿ ತನಿಖೆಗೆ ಮನವಿ ಮಾಡುವುದಾಗಿ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಬಿ.ಎನ್.ಜಗದೀಶ್ ತಿಳಿಸಿದರು.</p>.<p>ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನರೇಗಾ ಯೋಜನೆ ತಾಲ್ಲೂಕಿನಲ್ಲಿ ಗುತ್ತಿಗೆದಾರ, ಕಾಂಗ್ರೆಸ್ ಶಾಸಕರ, ಬೆಂಬಲಿಗರ ಪರವಾದ ಯೋಜನೆಯಾಗಿದೆ. ತಾಲ್ಲೂಕಿನ 36 ಗ್ರಾಮ ಪಂಚಾಯಿತಿಗಳಿಂದ ಎರಡು ವರ್ಷದಲ್ಲಿ ನೂರು ಕೋಟಿಗೂ ಹೆಚ್ಚಿನ ಅಕ್ರಮ ನಡೆದಿವೆ ಎಂದರು.</p>.<p>ತಾಲ್ಲೂಕಿನ ಡಿ.ಹೊಸಹಳ್ಳಿ, ಕೊಡವತ್ತಿ, ಹುಲಿಯೂರುದುರ್ಗ, ಯಡೆಯೂರು ಗ್ರಾಮ ಪಂಚಾಯಿತಿಗಳಲ್ಲಿ ಬದು ನಿರ್ಮಾಣ, ಕಟ್ಟೆಗಳ ಪುನಶ್ಚೇತನ ಸೇರಿದಂತೆ ವೈಯಕ್ತಿಕ, ಸಮುದಾಯಾಧಾರಿತ ಕಾಮಗಾರಿಗಳಲ್ಲಿ ಒಂದೇ ರೀತಿಯ ಭಾವಚಿತ್ರ ದಾಖಲಿಸಿ ಅಕ್ರಮವೆಸಗಿದ್ದಾರೆ. ಈ ಬಗ್ಗೆ ತಾಲ್ಲೂಕು ಪಂಚಾಯಿತಿ ಇಒ, ಜಿಲ್ಲಾ ಪಂಚಾಯಿತಿ ಅಧಿಕಾರಿಗೆ, ಸಾಮಾಜಿಕ ಲೆಕ್ಕ ಪರಿಶೋಧನ ವರದಿ ನೀಡಿದ್ದರೂ ಕೆಲವೆಡೆ ಒಂಬಡ್ಸಮೆನ್ ಅಧಿಕಾರಿಗಳು ಏನೂ ಆಗಿಲ್ಲ, ಎಲ್ಲ ಸಮರ್ಪಕವಾಗಿದೆ ಎಂದು ನಮೂದಿಸಿದ್ದಾರೆ ಎಂದರು.</p>.<p>ತನಿಖೆ ನಡೆಸಿ ಕ್ರಮಕೈಗೊಳ್ಳಲು ಅಸಮರ್ಥರಾಗಿರುವ ಕಾರಣ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಬೆಂಗಳೂರು ಗ್ರಾಮಾಂತರ ಸಂಸದ ಡಾ.ಮಂಜುನಾಥ್ ಅವರ ಮೂಲಕ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರಿಗೆ ಅಕ್ರಮದ ತನಿಖೆ ನಡೆಸಿ ಕ್ರಮಕೈಗೊಳ್ಳುವಂತೆ ಮನವಿ ಮಾಡಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಣಿಗಲ್</strong>: ತಾಲ್ಲೂಕಿನಲ್ಲಿ ಕಳೆದ ಎರಡು ವರ್ಷದಿಂದ ನರೇಗಾ ಯೋಜನೆಯಲ್ಲಿ ₹100 ಕೋಟಿಗೂ ಹೆಚ್ಚು ಅಕ್ರಮವಾಗಿದೆ. ಜಿಲ್ಲಾ ಪಂಚಾಯಿತಿ, ಒಂಬಡ್ಸ್ಮೆನ್ಗೆ ದೂರು ನೀಡಿದ್ದರೂ ಸಮರ್ಪಕ ತನಿಖೆ ನಡೆಸಲು ವಿಫಲರಾಗಿದ್ದಾರೆ. ಹೀಗಾಗಿ ಕೇಂದ್ರ ಸಚಿವರಿಗೆ ದೂರು ನೀಡಿ ತನಿಖೆಗೆ ಮನವಿ ಮಾಡುವುದಾಗಿ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಬಿ.ಎನ್.ಜಗದೀಶ್ ತಿಳಿಸಿದರು.</p>.<p>ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನರೇಗಾ ಯೋಜನೆ ತಾಲ್ಲೂಕಿನಲ್ಲಿ ಗುತ್ತಿಗೆದಾರ, ಕಾಂಗ್ರೆಸ್ ಶಾಸಕರ, ಬೆಂಬಲಿಗರ ಪರವಾದ ಯೋಜನೆಯಾಗಿದೆ. ತಾಲ್ಲೂಕಿನ 36 ಗ್ರಾಮ ಪಂಚಾಯಿತಿಗಳಿಂದ ಎರಡು ವರ್ಷದಲ್ಲಿ ನೂರು ಕೋಟಿಗೂ ಹೆಚ್ಚಿನ ಅಕ್ರಮ ನಡೆದಿವೆ ಎಂದರು.</p>.<p>ತಾಲ್ಲೂಕಿನ ಡಿ.ಹೊಸಹಳ್ಳಿ, ಕೊಡವತ್ತಿ, ಹುಲಿಯೂರುದುರ್ಗ, ಯಡೆಯೂರು ಗ್ರಾಮ ಪಂಚಾಯಿತಿಗಳಲ್ಲಿ ಬದು ನಿರ್ಮಾಣ, ಕಟ್ಟೆಗಳ ಪುನಶ್ಚೇತನ ಸೇರಿದಂತೆ ವೈಯಕ್ತಿಕ, ಸಮುದಾಯಾಧಾರಿತ ಕಾಮಗಾರಿಗಳಲ್ಲಿ ಒಂದೇ ರೀತಿಯ ಭಾವಚಿತ್ರ ದಾಖಲಿಸಿ ಅಕ್ರಮವೆಸಗಿದ್ದಾರೆ. ಈ ಬಗ್ಗೆ ತಾಲ್ಲೂಕು ಪಂಚಾಯಿತಿ ಇಒ, ಜಿಲ್ಲಾ ಪಂಚಾಯಿತಿ ಅಧಿಕಾರಿಗೆ, ಸಾಮಾಜಿಕ ಲೆಕ್ಕ ಪರಿಶೋಧನ ವರದಿ ನೀಡಿದ್ದರೂ ಕೆಲವೆಡೆ ಒಂಬಡ್ಸಮೆನ್ ಅಧಿಕಾರಿಗಳು ಏನೂ ಆಗಿಲ್ಲ, ಎಲ್ಲ ಸಮರ್ಪಕವಾಗಿದೆ ಎಂದು ನಮೂದಿಸಿದ್ದಾರೆ ಎಂದರು.</p>.<p>ತನಿಖೆ ನಡೆಸಿ ಕ್ರಮಕೈಗೊಳ್ಳಲು ಅಸಮರ್ಥರಾಗಿರುವ ಕಾರಣ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಬೆಂಗಳೂರು ಗ್ರಾಮಾಂತರ ಸಂಸದ ಡಾ.ಮಂಜುನಾಥ್ ಅವರ ಮೂಲಕ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರಿಗೆ ಅಕ್ರಮದ ತನಿಖೆ ನಡೆಸಿ ಕ್ರಮಕೈಗೊಳ್ಳುವಂತೆ ಮನವಿ ಮಾಡಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>