<p><strong>ಕುಣಿಗಲ್</strong>: ಕುಣಿಗಲ್ ದೊಡ್ಡಕೆರೆ ರಾಮಬಾಣ ಹಂತದ ನಾಲೆಯ ತೂಬಿನಲ್ಲಿ ನಿರ್ಮಿಸಿದ್ದ ಕಾಂಕ್ರಿಟ್ ತಡೆಯನ್ನು ಶಾಸಕ ಡಾ.ರಂಗನಾಥ್ ಭಾನುವಾರ ತೆರವುಗೊಳಿಸಿ ನೀರು ಹರಿಸುವ ಕಾರ್ಯಕ್ಕೆ ಚಾಲನೆ ನೀಡಿದರು.</p>.<p>ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೊಡ್ಡಕೆರೆ ವ್ಯಾಪ್ತಿಯ ಲಕ್ಷ್ಮೀದೇವಿ ಹಂತ ಮತ್ತು ರಾಮಬಾಣಹಂತ ಕಾಲುವೆಗಳಿದ್ದು, ಕೆರೆ ನೀರು ತುಂಬಿದ್ದರೂ ನಾಲೆಗಳಲ್ಲಿ ಹರಿಯದ ಸ್ಥಿತಿ ನಿರ್ಮಾಣವಾಗಿತ್ತು. ಈ ಬಗ್ಗೆ ಗಮನಹರಿಸಿದ್ದು ಮುಳುಗು ತಜ್ಞರ ತಂಡ ಭೇಟಿ ನೀಡಿ ಪರಿಶೀಲಿಸಿದಾಗ ತೂಬಿನ ಪ್ರದೇಶದಲ್ಲಿ ನಾಲೆಗೆ ನೀರು ಹರಿಯದಂತೆ ತೂಬಿನಲ್ಲಿ ಕಾಂಕ್ರಿಟ್ ತಡೆ ನಿರ್ಮಿಸಿರುವುದು ಕಂಡುಬಂದಿದೆ. ವಿಶೇಷ ಕಾರ್ಯಪಡೆ ಮೂಲಕ ನೀರಿನಾಳದಲ್ಲಿರುವ ತೂಬಿನ ಕಾಂಕ್ರಿಟ್ ತಡೆಗೋಡೆ ತೆರವುಗೊಳಿಸಿ ನೀರು ಹರಿಸಲಾಗುತ್ತಿದೆ ಎಂದರು.</p>.<p>ಸದ್ಯಕ್ಕೆ ಪ್ರಾಯೋಗಿಕವಾಗಿ ನೀರು ಹರಿಸುತ್ತಿದ್ದು, ಮುಂದಿನ ದಿನಗಳಲ್ಲಿ ನಾಲೆ ದುರಸ್ತಿಗೊಳಿಸಿ ಆದ್ಯತೆ ಮೇರೆಗೆ ಕೃಷಿಗೆ ನೀರು ನೀಡುವ ಬಗ್ಗೆ ಗಮನಹರಿಸಲಾಗುವುದು ಎಂದರು.</p>.<p>ಹೇಮಾವತಿ ನಾಲ ವಲಯದ ಎಇಇ ರವಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣಗೌಡ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಣಿಗಲ್</strong>: ಕುಣಿಗಲ್ ದೊಡ್ಡಕೆರೆ ರಾಮಬಾಣ ಹಂತದ ನಾಲೆಯ ತೂಬಿನಲ್ಲಿ ನಿರ್ಮಿಸಿದ್ದ ಕಾಂಕ್ರಿಟ್ ತಡೆಯನ್ನು ಶಾಸಕ ಡಾ.ರಂಗನಾಥ್ ಭಾನುವಾರ ತೆರವುಗೊಳಿಸಿ ನೀರು ಹರಿಸುವ ಕಾರ್ಯಕ್ಕೆ ಚಾಲನೆ ನೀಡಿದರು.</p>.<p>ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೊಡ್ಡಕೆರೆ ವ್ಯಾಪ್ತಿಯ ಲಕ್ಷ್ಮೀದೇವಿ ಹಂತ ಮತ್ತು ರಾಮಬಾಣಹಂತ ಕಾಲುವೆಗಳಿದ್ದು, ಕೆರೆ ನೀರು ತುಂಬಿದ್ದರೂ ನಾಲೆಗಳಲ್ಲಿ ಹರಿಯದ ಸ್ಥಿತಿ ನಿರ್ಮಾಣವಾಗಿತ್ತು. ಈ ಬಗ್ಗೆ ಗಮನಹರಿಸಿದ್ದು ಮುಳುಗು ತಜ್ಞರ ತಂಡ ಭೇಟಿ ನೀಡಿ ಪರಿಶೀಲಿಸಿದಾಗ ತೂಬಿನ ಪ್ರದೇಶದಲ್ಲಿ ನಾಲೆಗೆ ನೀರು ಹರಿಯದಂತೆ ತೂಬಿನಲ್ಲಿ ಕಾಂಕ್ರಿಟ್ ತಡೆ ನಿರ್ಮಿಸಿರುವುದು ಕಂಡುಬಂದಿದೆ. ವಿಶೇಷ ಕಾರ್ಯಪಡೆ ಮೂಲಕ ನೀರಿನಾಳದಲ್ಲಿರುವ ತೂಬಿನ ಕಾಂಕ್ರಿಟ್ ತಡೆಗೋಡೆ ತೆರವುಗೊಳಿಸಿ ನೀರು ಹರಿಸಲಾಗುತ್ತಿದೆ ಎಂದರು.</p>.<p>ಸದ್ಯಕ್ಕೆ ಪ್ರಾಯೋಗಿಕವಾಗಿ ನೀರು ಹರಿಸುತ್ತಿದ್ದು, ಮುಂದಿನ ದಿನಗಳಲ್ಲಿ ನಾಲೆ ದುರಸ್ತಿಗೊಳಿಸಿ ಆದ್ಯತೆ ಮೇರೆಗೆ ಕೃಷಿಗೆ ನೀರು ನೀಡುವ ಬಗ್ಗೆ ಗಮನಹರಿಸಲಾಗುವುದು ಎಂದರು.</p>.<p>ಹೇಮಾವತಿ ನಾಲ ವಲಯದ ಎಇಇ ರವಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣಗೌಡ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>