<p><strong>ಕುಣಿಗಲ್:</strong> ಪುರಸಭೆಯಿಂದ ಸರಿಯಾಗಿ ಶುದ್ಧಿಕರಿಸದ ಕಲುಷಿತ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಪಟ್ಟಣ ನಿವಾಸಿಗಳು ಆರೋಪಿಸಿದ್ದಾರೆ.</p>.<p>ಪಟ್ಟಣದ ಸಂತೆಮೈದಾನದ ಬಳಿ ನೀರು ಶುದ್ಧಿಕರಣ ಘಟಕದಿಂದ ಪಟ್ಟಣದ ನಾಗರಿಕರಿಗೆ ಶುದ್ಧ ನೀರು ವಿತರಿಸಬೇಕಾಗಿದ್ದು, ಸರಿ ಪ್ರಮಾಣದಲ್ಲಿ ಆಲಂ, ಬ್ಲಿಚಿಂಗ್ ಪೌಡರ್, ಕ್ಲೊರಿನ್ ಬಳಸಿ ಶುದ್ಧಿಕರಿಸಿ ವಿತರಣೆ ಮಾಡುವಲ್ಲಿ ಅಧಿಕಾರಿಗಳ ನಿರ್ಲಕ್ಷ್ಯವಹಿಸಿದ್ದು, ಕಲುಷಿತ ನೀರು ಸರಬರಾಜಾಗುತ್ತಿದೆ ಎಂದು ದೂರಿದ್ದಾರೆ.</p>.<p>ಪುರಸಭೆಯ 19ರಿಂದ 23 ಮತ್ತು 5, 8ನೇ ವಾರ್ಡ್ ನೀರಿನ ಸಂಪ್ಗಳಲ್ಲಿ ಕಲುಷಿತ ನೀರು ಸಂಗ್ರಹವಾಗಿದೆ. ಜನರು ನೀರು ಬಳಸಲು ಆಗದೆ ಹೊರಚೆಲ್ಲುತ್ತಿದ್ದಾರೆ. ಪುರಸಭೆ ನಿರ್ಲಕ್ಷ್ಯದಿಂದಾಗಿ ಸಂಪ್ ಶುಚಿ ಮಾಡುವ ಗುತ್ತಿಗೆದಾರರಿಗೆ ಕೆಲಸ ಹೆಚ್ಚಾಗಿ, ಆರ್ಥಿಕ ಹೊರೆಯಾಗುತ್ತಿದೆ ಎಂದು ಜನರು ದೂರಿದ್ದಾರೆ. </p>.<p>ಪುರಸಭೆ ಮಾಜಿ ಅಧ್ಯಕ್ಷ ಕೆ.ಎಲ್.ಹರೀಶ್ ಮಾತನಾಡಿ, ಅಧಿಕಾರಿಗಳಿಗೆ ದೂರು ನೀಡಿದ್ದರೂ ಪ್ರಯೋಜನವಾಗಿಲ್ಲ. ಉಪವಿಭಾಗಾಧಿಕಾರಿಗೆ ದೂರು ನೀಡಿದ್ದು, ಶುದ್ಧಿಕರಣ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು. ನೀರಿನ ಮಾದರಿ ಸಂಗ್ರಹಿಸಿಕೊಂಡು ಹೋದವರು ಮತ್ತೆ ಈ ಬಗ್ಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಶಾಸಕರಿಗೆ ಈ ಬಗ್ಗೆ ಗಮನ ಹರಿಸಲು ಮನವಿ ಮಾಡಿದ್ದರೂ ಕುಣಿಗಲ್ ಉತ್ಸವದ ಕಾರ್ಯದಲ್ಲಿರುವ ಶಾಸಕರು ಶುದ್ಧ ಕುಡಿಯವ ನೀರು ವಿತರಿಸುವ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಇದೇ ಸ್ಥಿತಿ ಮುಂದುವರೆದರೆ ಶುದ್ಧಿಕರಣ ಘಟಕದ ಮುಂದೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.</p>.<p>ಪುರಸಭೆ ಮಾಜಿ ಪುರಸಭೆ ಅಧ್ಯಕ್ಷ ರಂಗಸ್ವಾಮಿ ಪ್ರತಿಕ್ರಿಯಿಸಿ ಕೆ.ಎಲ್.ಹರೀಶ್ ಅವರ ಹೇಳಿಕೆಯನ್ನು ಖಂಡಿಸಿದ್ದಾರೆ.</p>.<p>ಶುದ್ಧ ಕುಡಿಯುವ ನೀರು ವಿತರಣೆಗೆ ಗಮನಹರಿಸುವಂತೆ ನಾಗರಿಕರಾದ ಉಮೇಶ್, ಮಹಾಲಕ್ಷ್ಮೀ, ಶ್ರೀನಿವಾಸ್ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಣಿಗಲ್:</strong> ಪುರಸಭೆಯಿಂದ ಸರಿಯಾಗಿ ಶುದ್ಧಿಕರಿಸದ ಕಲುಷಿತ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಪಟ್ಟಣ ನಿವಾಸಿಗಳು ಆರೋಪಿಸಿದ್ದಾರೆ.</p>.<p>ಪಟ್ಟಣದ ಸಂತೆಮೈದಾನದ ಬಳಿ ನೀರು ಶುದ್ಧಿಕರಣ ಘಟಕದಿಂದ ಪಟ್ಟಣದ ನಾಗರಿಕರಿಗೆ ಶುದ್ಧ ನೀರು ವಿತರಿಸಬೇಕಾಗಿದ್ದು, ಸರಿ ಪ್ರಮಾಣದಲ್ಲಿ ಆಲಂ, ಬ್ಲಿಚಿಂಗ್ ಪೌಡರ್, ಕ್ಲೊರಿನ್ ಬಳಸಿ ಶುದ್ಧಿಕರಿಸಿ ವಿತರಣೆ ಮಾಡುವಲ್ಲಿ ಅಧಿಕಾರಿಗಳ ನಿರ್ಲಕ್ಷ್ಯವಹಿಸಿದ್ದು, ಕಲುಷಿತ ನೀರು ಸರಬರಾಜಾಗುತ್ತಿದೆ ಎಂದು ದೂರಿದ್ದಾರೆ.</p>.<p>ಪುರಸಭೆಯ 19ರಿಂದ 23 ಮತ್ತು 5, 8ನೇ ವಾರ್ಡ್ ನೀರಿನ ಸಂಪ್ಗಳಲ್ಲಿ ಕಲುಷಿತ ನೀರು ಸಂಗ್ರಹವಾಗಿದೆ. ಜನರು ನೀರು ಬಳಸಲು ಆಗದೆ ಹೊರಚೆಲ್ಲುತ್ತಿದ್ದಾರೆ. ಪುರಸಭೆ ನಿರ್ಲಕ್ಷ್ಯದಿಂದಾಗಿ ಸಂಪ್ ಶುಚಿ ಮಾಡುವ ಗುತ್ತಿಗೆದಾರರಿಗೆ ಕೆಲಸ ಹೆಚ್ಚಾಗಿ, ಆರ್ಥಿಕ ಹೊರೆಯಾಗುತ್ತಿದೆ ಎಂದು ಜನರು ದೂರಿದ್ದಾರೆ. </p>.<p>ಪುರಸಭೆ ಮಾಜಿ ಅಧ್ಯಕ್ಷ ಕೆ.ಎಲ್.ಹರೀಶ್ ಮಾತನಾಡಿ, ಅಧಿಕಾರಿಗಳಿಗೆ ದೂರು ನೀಡಿದ್ದರೂ ಪ್ರಯೋಜನವಾಗಿಲ್ಲ. ಉಪವಿಭಾಗಾಧಿಕಾರಿಗೆ ದೂರು ನೀಡಿದ್ದು, ಶುದ್ಧಿಕರಣ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು. ನೀರಿನ ಮಾದರಿ ಸಂಗ್ರಹಿಸಿಕೊಂಡು ಹೋದವರು ಮತ್ತೆ ಈ ಬಗ್ಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಶಾಸಕರಿಗೆ ಈ ಬಗ್ಗೆ ಗಮನ ಹರಿಸಲು ಮನವಿ ಮಾಡಿದ್ದರೂ ಕುಣಿಗಲ್ ಉತ್ಸವದ ಕಾರ್ಯದಲ್ಲಿರುವ ಶಾಸಕರು ಶುದ್ಧ ಕುಡಿಯವ ನೀರು ವಿತರಿಸುವ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಇದೇ ಸ್ಥಿತಿ ಮುಂದುವರೆದರೆ ಶುದ್ಧಿಕರಣ ಘಟಕದ ಮುಂದೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.</p>.<p>ಪುರಸಭೆ ಮಾಜಿ ಪುರಸಭೆ ಅಧ್ಯಕ್ಷ ರಂಗಸ್ವಾಮಿ ಪ್ರತಿಕ್ರಿಯಿಸಿ ಕೆ.ಎಲ್.ಹರೀಶ್ ಅವರ ಹೇಳಿಕೆಯನ್ನು ಖಂಡಿಸಿದ್ದಾರೆ.</p>.<p>ಶುದ್ಧ ಕುಡಿಯುವ ನೀರು ವಿತರಣೆಗೆ ಗಮನಹರಿಸುವಂತೆ ನಾಗರಿಕರಾದ ಉಮೇಶ್, ಮಹಾಲಕ್ಷ್ಮೀ, ಶ್ರೀನಿವಾಸ್ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>