<p><strong>ಕುಣಿಗಲ್</strong>: ತಾಲ್ಲೂಕಿನ 36 ಗ್ರಾಮ ಪಂಚಾಯಿತಿಗಳ ಪೈಕಿ 26 ಗ್ರಾಮ ಪಂಚಾಯಿತಿಗಳ 65 ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಪಿಡಿಒಗಳು ಸಮಸ್ಯೆಗೆ ಸ್ಪಂದಿಸಿ ಕಾರ್ಯನಿರ್ವಹಿಸಬೇಕು ಎಂದು ಶಾಸಕ ಡಾ.ರಂಗನಾಥ್ ಸೂಚಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಕೊಳವೆಬಾವಿ ಕೊರೆಯುವುದೇ ಪರಿಹಾರವಲ್ಲ. ಟ್ಯಾಂಕರ್ ಮೂಲಕ ನೀರು ವಿತರಣೆಗೆ ಗಮನಹರಿಸಲು ಮತ್ತು ಖಾಸಗಿ ಕೊಳವೆಬಾವಿ ಮಾಲೀಕರಲ್ಲಿ ಒಪ್ಪಂದ ಮಾಡಿಕೊಂಡು ನೀರು ಪಡೆದು ವಿತರಿಸಲು ಸಲಹೆ ನೀಡಿದರು.</p>.<p>ಸದ್ಯಕ್ಕೆ ಕೊತ್ತಗೆರೆ ಹೋಬಳಿ ತರೆದಕುಪ್ಪೆ ಮತ್ತು ಬಾಗೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ ಮೂರು ತಿಂಗಳಿನಿಂದ ಸಮಸ್ಯೆ ಹೆಚ್ಚಾಗಿದೆ. ನೀರಿನ ವ್ಯವಸ್ಥೆಗೆ ಅಧಿಕಾರಿಗಳು ಶ್ರಮಪಡುತ್ತಿದ್ದು, ಗ್ರಾಮಸ್ಥರು ಸಹಕಾರ ನೀಡಲು ಮನವಿ ಮಾಡಿದರು.</p>.<p>ಇನ್ನೂ ಒಂದು ತಿಂಗಳು ಕಷ್ಟದ ದಿನಗಳಾಗಿದ್ದು, ಗ್ರಾಮ ಪಂಚಾಯಿತಿ ಪಿಡಿಒಗಳು ಮೊಬೈಲ್ ಸ್ವಿಚ್ಡ್ ಆಫ್ ಮಾಡಿಕೊಳ್ಳದೆ ನೀರಿನ ಸಮಸ್ಯೆಗಳಿಗೆ ಸ್ಪಂದಿಸವಂತೆ ತಾಕೀತು ಮಾಡಿದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವಸಂತ್ ಕುಮಾರ್ ಮಾತನಾಡಿ, ತಾಲ್ಲೂಕಿನಲ್ಲಿ 135 ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು, 21 ಕೆಟ್ಟಿವೆ. 15 ದುರಸ್ತಿ ಮಾಡಲಾಗಿದೆ. ಇನ್ನೂ ಆರು ಘಟಕಗಳು ದುರಸ್ತಿಯಾಗಬೇಕಿದೆ ಎಂದು ಮಾಹಿತಿ ನೀಡಿದರು.</p>.<p>ತಹಶೀಲ್ದಾರ್ ಕರಿಯಾ ನಾಯಕ್, ನರೇಗಾ ಸಹಾಯಕ ನಿರ್ದೇಶಕ ಕಾಂತರಾಜು, ಗ್ರಾಮಪಂಚಾಯಿತಿ ಪಿಡಿಒ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಣಿಗಲ್</strong>: ತಾಲ್ಲೂಕಿನ 36 ಗ್ರಾಮ ಪಂಚಾಯಿತಿಗಳ ಪೈಕಿ 26 ಗ್ರಾಮ ಪಂಚಾಯಿತಿಗಳ 65 ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಪಿಡಿಒಗಳು ಸಮಸ್ಯೆಗೆ ಸ್ಪಂದಿಸಿ ಕಾರ್ಯನಿರ್ವಹಿಸಬೇಕು ಎಂದು ಶಾಸಕ ಡಾ.ರಂಗನಾಥ್ ಸೂಚಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಕೊಳವೆಬಾವಿ ಕೊರೆಯುವುದೇ ಪರಿಹಾರವಲ್ಲ. ಟ್ಯಾಂಕರ್ ಮೂಲಕ ನೀರು ವಿತರಣೆಗೆ ಗಮನಹರಿಸಲು ಮತ್ತು ಖಾಸಗಿ ಕೊಳವೆಬಾವಿ ಮಾಲೀಕರಲ್ಲಿ ಒಪ್ಪಂದ ಮಾಡಿಕೊಂಡು ನೀರು ಪಡೆದು ವಿತರಿಸಲು ಸಲಹೆ ನೀಡಿದರು.</p>.<p>ಸದ್ಯಕ್ಕೆ ಕೊತ್ತಗೆರೆ ಹೋಬಳಿ ತರೆದಕುಪ್ಪೆ ಮತ್ತು ಬಾಗೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ ಮೂರು ತಿಂಗಳಿನಿಂದ ಸಮಸ್ಯೆ ಹೆಚ್ಚಾಗಿದೆ. ನೀರಿನ ವ್ಯವಸ್ಥೆಗೆ ಅಧಿಕಾರಿಗಳು ಶ್ರಮಪಡುತ್ತಿದ್ದು, ಗ್ರಾಮಸ್ಥರು ಸಹಕಾರ ನೀಡಲು ಮನವಿ ಮಾಡಿದರು.</p>.<p>ಇನ್ನೂ ಒಂದು ತಿಂಗಳು ಕಷ್ಟದ ದಿನಗಳಾಗಿದ್ದು, ಗ್ರಾಮ ಪಂಚಾಯಿತಿ ಪಿಡಿಒಗಳು ಮೊಬೈಲ್ ಸ್ವಿಚ್ಡ್ ಆಫ್ ಮಾಡಿಕೊಳ್ಳದೆ ನೀರಿನ ಸಮಸ್ಯೆಗಳಿಗೆ ಸ್ಪಂದಿಸವಂತೆ ತಾಕೀತು ಮಾಡಿದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವಸಂತ್ ಕುಮಾರ್ ಮಾತನಾಡಿ, ತಾಲ್ಲೂಕಿನಲ್ಲಿ 135 ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು, 21 ಕೆಟ್ಟಿವೆ. 15 ದುರಸ್ತಿ ಮಾಡಲಾಗಿದೆ. ಇನ್ನೂ ಆರು ಘಟಕಗಳು ದುರಸ್ತಿಯಾಗಬೇಕಿದೆ ಎಂದು ಮಾಹಿತಿ ನೀಡಿದರು.</p>.<p>ತಹಶೀಲ್ದಾರ್ ಕರಿಯಾ ನಾಯಕ್, ನರೇಗಾ ಸಹಾಯಕ ನಿರ್ದೇಶಕ ಕಾಂತರಾಜು, ಗ್ರಾಮಪಂಚಾಯಿತಿ ಪಿಡಿಒ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>