<p><strong>ಕುಣಿಗಲ್ (ತುಮಕೂರು):</strong> ದೇವಸ್ಥಾನಕ್ಕೆ ತೆರಳಿದ್ದ ಪರಿಶಿಷ್ಟ ಜಾತಿಯ ಮಹಿಳೆ, ಆಕೆಯ ತಾಯಿ ಮತ್ತು ತಂಗಿಯನ್ನು ದೇವಸ್ಥಾನದ ಅರ್ಚಕ ಮತ್ತಿತರರು ಸೇರಿ ದೇವಸ್ಥಾನದಿಂದ ಹೊರದಬ್ಬಿದ್ದಾರೆ. </p><p>ಬೆಂಗಳೂರು–ಮಾಗಡಿ ರಸ್ತೆಯ ಅಂದ್ರಳ್ಳಿ ನಿವಾಸಿ ರೋಜಾ ತನ್ನ ತವರುಮನೆ ಇರುವ ಯಡಿಯೂರು ಹೋಬಳಿ ತಿಗಳರಪಾಳ್ಯ ಗ್ರಾಮಕ್ಕೆ ಮಾರಮ್ಮ ದೇವಿ ಹಬ್ಬಕ್ಕೆ ಬಂದಿದ್ದರು.</p><p>ಸೋಮವಾರ ರಾತ್ರಿ ಗ್ರಾಮದ ವೆಂಕಟರಮಣ ಮೂಡಲಗಿರಿ ದೇವಾಲಯಕ್ಕೆ ತಾಯಿ ಮತ್ತು ತಂಗಿಯನ್ನು ಕರೆದುಕೊಂಡು ಹೋಗಿದ್ದರು.</p><p>‘ದೇವಸ್ಥಾನದ ಒಳಗೆ ಪ್ರವೇಶಿಸಿದಾಗ ಅರ್ಚಕ ಹನುಮಯ್ಯ, ಗ್ರಾಮದ ಜಯಲಕ್ಷ್ಮಮ್ಮ, ಶ್ರೀನಿವಾಸ್ ಹಾಗೂ ಇತರ 16 ಜನ ಸೇರಿಕೊಂಡು ಹೊರ ಹೋಗುವಂತೆ ನಿಂದಿಸಿದ್ದಾರೆ’ ಎಂದು ಮಹಿಳೆ ಅಮೃತೂರು ಠಾಣೆಗೆ ದೂರು ನೀಡಿದ್ದಾರೆ. </p><p>‘ನೀನು ಕೀಳು ಜಾತಿಯವಳು. ದೇವಸ್ಥಾನದ ಒಳಗೆ ಬರಬಾರದು’ ಎಂದು ಜಾತಿ ಹಿಡಿದು ನಿಂದಿಸಿ, ಗಲಾಟೆ ಮಾಡಿ ತಲೆಯ ಕೂದಲು ಹಿಡಿದು ಎಳೆದಾಡಿದರು. ನಂತರ ದೇವಸ್ಥಾನದಿಂದ ಹೊರಗೆ ತಳ್ಳಿದರು’ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಪ್ರಕರಣ ದಾಖಲಿಸಿರುವ ಪೊಲೀಸರು ದೇಗುಲದ ಅರ್ಚಕರನ್ನು<br>ಬಂಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಣಿಗಲ್ (ತುಮಕೂರು):</strong> ದೇವಸ್ಥಾನಕ್ಕೆ ತೆರಳಿದ್ದ ಪರಿಶಿಷ್ಟ ಜಾತಿಯ ಮಹಿಳೆ, ಆಕೆಯ ತಾಯಿ ಮತ್ತು ತಂಗಿಯನ್ನು ದೇವಸ್ಥಾನದ ಅರ್ಚಕ ಮತ್ತಿತರರು ಸೇರಿ ದೇವಸ್ಥಾನದಿಂದ ಹೊರದಬ್ಬಿದ್ದಾರೆ. </p><p>ಬೆಂಗಳೂರು–ಮಾಗಡಿ ರಸ್ತೆಯ ಅಂದ್ರಳ್ಳಿ ನಿವಾಸಿ ರೋಜಾ ತನ್ನ ತವರುಮನೆ ಇರುವ ಯಡಿಯೂರು ಹೋಬಳಿ ತಿಗಳರಪಾಳ್ಯ ಗ್ರಾಮಕ್ಕೆ ಮಾರಮ್ಮ ದೇವಿ ಹಬ್ಬಕ್ಕೆ ಬಂದಿದ್ದರು.</p><p>ಸೋಮವಾರ ರಾತ್ರಿ ಗ್ರಾಮದ ವೆಂಕಟರಮಣ ಮೂಡಲಗಿರಿ ದೇವಾಲಯಕ್ಕೆ ತಾಯಿ ಮತ್ತು ತಂಗಿಯನ್ನು ಕರೆದುಕೊಂಡು ಹೋಗಿದ್ದರು.</p><p>‘ದೇವಸ್ಥಾನದ ಒಳಗೆ ಪ್ರವೇಶಿಸಿದಾಗ ಅರ್ಚಕ ಹನುಮಯ್ಯ, ಗ್ರಾಮದ ಜಯಲಕ್ಷ್ಮಮ್ಮ, ಶ್ರೀನಿವಾಸ್ ಹಾಗೂ ಇತರ 16 ಜನ ಸೇರಿಕೊಂಡು ಹೊರ ಹೋಗುವಂತೆ ನಿಂದಿಸಿದ್ದಾರೆ’ ಎಂದು ಮಹಿಳೆ ಅಮೃತೂರು ಠಾಣೆಗೆ ದೂರು ನೀಡಿದ್ದಾರೆ. </p><p>‘ನೀನು ಕೀಳು ಜಾತಿಯವಳು. ದೇವಸ್ಥಾನದ ಒಳಗೆ ಬರಬಾರದು’ ಎಂದು ಜಾತಿ ಹಿಡಿದು ನಿಂದಿಸಿ, ಗಲಾಟೆ ಮಾಡಿ ತಲೆಯ ಕೂದಲು ಹಿಡಿದು ಎಳೆದಾಡಿದರು. ನಂತರ ದೇವಸ್ಥಾನದಿಂದ ಹೊರಗೆ ತಳ್ಳಿದರು’ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಪ್ರಕರಣ ದಾಖಲಿಸಿರುವ ಪೊಲೀಸರು ದೇಗುಲದ ಅರ್ಚಕರನ್ನು<br>ಬಂಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>