ಪುಟ್ಟ ಕೋಣೆ ತುಂಬಾ ರಕ್ತ ಹರಡಿತ್ತು. ಒಂದು ಕಡೆ ರುಂಡ ಮತ್ತು ಮತ್ತೊಂದು ಕಡೆ ವಿಕಾರವಾಗಿ ತುಂಡು, ತುಂಡಾಗಿ ಕತ್ತರಿಸಿ ಹಾಕಿದ್ದ ದೇಹ ಇತ್ತು. ಕರಳು ಹಾಗೂ ಇತರ ಅಂಗಾಂಗಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಪಕ್ಕದಲ್ಲಿಯೇ ಎಂಟು ವರ್ಷದ ಮಗು ಮಲಗಿತ್ತು. ಆರೋಪಿ ಇಡೀ ರಾತ್ರಿ ಶವದ ಜೊತೆಯಲ್ಲಿಯೇ ಕಳೆದಿದ್ದಾನೆ.
ಮಂಗಳವಾರ ಬೆಳಗಿನ ಜಾವ ಶಿವರಾಮ ತಾನು ಕೆಲಸ ಮಾಡುತ್ತಿದ್ದ ಸಾಮಿಲ್ ಮಾಲೀಕರ ಮಗ ಪ್ರದೀಪ್ ಎಂಬುವರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾನೆ. ಪ್ರದೀಪ್ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.
ಬೆಳಗಿನ ಜಾವ ಮನೆಗೆ ಹೋದ ಪೊಲೀಸರು ಸ್ಥಳದಲ್ಲಿ ವಿಕಾರವಾಗಿ ಬಿದ್ದಿದ್ದ ಶವವನ್ನು ನೋಡಿ ಬೆಚ್ಚಿ ಬಿದ್ದಿದ್ದಾರೆ. ಏನೂ ನಡೆದಿಲ್ಲ ಎಂಬಂತೆ ಮನೆಯಲ್ಲಿಯೇ ಸಹಜವಾಗಿ ಕುಳಿತಿದ್ದ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಪಟ್ಟಣದಲ್ಲಿಯೇ ಇರುವ ಪುಷ್ಪಾ ಸಂಬಂಧಿ ಶಿವಶಂಕರ್ ಎಂಬುವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ತಂದೆಯೊಂದಿಗೆ ಮಗುವನ್ನೂ ಠಾಣೆಗೆ ಕರೆದೊಯ್ದು ಪೊಲೀಸರು ನಂತರ ಸಂಬಂಧಿಕರಿಗೆ ಹಸ್ತಾಂತರಿಸಿದ್ದಾರೆ. ‘ನನ್ನನ್ನು ನಾಳೆ ಹಾಸ್ಟೆಲ್ಗೆ ಸೇರಿಸುವುದಾಗಿ ಅಮ್ಮ ಹೇಳಿದ್ದಳು’ ಎಂದು ಮಗು ಹೇಳಿದೆ.
‘ನನ್ನ 25 ವರ್ಷದ ಸೇವೆಯಲ್ಲಿ ಇಷ್ಟೊಂದು ಕ್ರೂರ ಮತ್ತು ಭೀಕರ ಹತ್ಯೆ ಯನ್ನು ನಾನು ನೋಡಿರಲಿಲ್ಲ’ ಎಂದು ಅಮೃತೂರು ಠಾಣೆಯ ಇನ್ಸ್ಪೆಕ್ಟರ್ ಮಾದ್ಯಾ ನಾಯಕ್ ಹೇಳಿದ್ದಾರೆ.
‘ನನ್ನ ಹೆಂಡತಿ ಮನೆಯಲ್ಲಿ ಸರಿಯಾಗಿ ಅಡುಗೆ ಮಾಡುತ್ತಿರಲಿಲ್ಲ. ಮೊಬೈಲ್ನಲ್ಲಿ ಸದಾ ಯಾರದೋ ಜೊತೆ ಮಾತನಾಡುತ್ತಿದ್ದಳು. ರಾತ್ರಿ ಮನೆಗೆ ಬಂದಾಗ ಅಡುಗೆ ಮಾಡಿರಲಿಲ್ಲ. ಮಧ್ಯಾಹ್ನ ಉಳಿದ ಅಡುಗೆಯನ್ನು ತಿನ್ನುವಂತೆ ಹೇಳಿದಳು. ಇದರಿಂದ ಜಗಳ ಶುರುವಾಯ್ತು‘ ಎಂದು ಆರೋಪಿ ಹೇಳಿದ್ದಾನೆ.