ಎಡೆಯೂರು ಮಠದ ರೇಣುಕ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ವೀರಶೈವ ಪದ್ಧತಿಯಂತೆ ಕ್ರಿಯಾ ಸಮಾಧಿ ನೆರವೇರಿಸಲಾಯಿತು. ಅಂತಿಮ ಸಂಸ್ಕಾರದ ವೇಳೆ ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಹೊನ್ನವಳ್ಳಿ ಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ, ಮಾದೀಹಳ್ಳಿ ಮಠದ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ದೊಡ್ಡಗುಣಿ ಮಠದ ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ, ತಿಪಟೂರು ಷಡಕ್ಷರದ ಮಠದ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ಬೀರೂರು, ಅಂಬಲದೇವರ ಮಠ ಸೇರಿದಂತೆ ವಿವಿಧ ಮಠಾಧೀಶರು ಪಾಲ್ಗೊಂಡಿದ್ದರು.