ತುಮಕೂರು: ‘ಬಿ.ಕೆ.ಮಂಜುನಾಥ್ ಅವರು ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಎಂದು ಹೇಳಿಕೊಂಡಿದ್ದಾರೆ. ಅವರು ಕಾಳಿದಾಸ ವಿದ್ಯಾವರ್ಧಕ ಸಂಘಕ್ಕೆ ಅಧ್ಯಕ್ಷರಾಗಿರುವುದು ಸತ್ಯ. ಆದರೆ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಎಂದು ಬಿಂಬಿಸಿಕೊಂಡಿರುವುದು ಸರಿಯಲ್ಲ. ಈ ಮೂಲಕ ಸಮಾಜದಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ’ ಎಂದು ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಟಿ.ಆರ್.ಸುರೇಶ್, ಕಾರ್ಯಾಧ್ಯಕ್ಷ ಆರ್.ಎಂ.ಸಿ.ರಾಜು ತಿಳಿಸಿದ್ದಾರೆ.