ತಹಶೀಲ್ದಾರ್ ಕಚೇರಿ ಎದುರು ಧರಣಿ ನಡೆಸಿದ ಮಹಿಳೆಯರು ‘ವಿನಾ ಕಾರಣ ಗ್ರಾಮದ ಜಾತ್ರೆ ವಿಚಾರಕ್ಕೆ ಸಚಿವ ಜಿ. ಪರಮೇಶ್ವರ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕೆರೆ ಶಂಕರ್ ಹೆಸರು ಬಳಸಿ ಅವರ ಹೆಸರಿಗೆ ಮಸಿ ಬಳಿಯುತ್ತಿದ್ದಾರೆ. ಗ್ರಾಮಕ್ಕೂ ಇವರಿಗೂ ಸಂಬಂಧವೇ ಇಲ್ಲ. ಆದರೂ ರಾಜಕೀಯ ದುರುದ್ದೇಶದಿಂದ ಅವರ ಹೆಸರಿಗೆ ಕಳಂಕ ತರುತ್ತಿದ್ದಾರೆ. ಗ್ರಾಮದಲ್ಲಿ ಅಶಾಂತಿ ಸೃಷ್ಟಿಸುತ್ತಿದ್ದಾರೆ. ಜಾತ್ರಾ ಮಹೋತ್ಸವದ ಕರ ಪತ್ರದಲ್ಲಿ ಹೆಸರು ಬಿಟ್ಟಿರುವ ಕಾರಣಕ್ಕೆ ಊರಿನ ಗೌಡರ ವಿರುದ್ಧ ಸುಳ್ಳು ಜಾತಿನಿಂದನೆ ಪ್ರಕರಣ ದಾಖಲಿಸಲಾಗಿದೆ’ ಎಂದು ಆರೋಪಿಸಿದರು.