ತುಮಕೂರು: ಅಂಗಡಿ ಪರವಾನಗಿ ನವೀಕರಣ ನೀಡಲು ಹಣಕ್ಕೆ ಬೇಡಿಕೆ ಇಟ್ಟಿದ್ದ ಕಾರ್ಮಿಕ ಇಲಾಖೆಯ ಕಾರ್ಮಿಕ ನಿರೀಕ್ಷಕ ರಮೇಶ್ ಜಿ. ಇಂಗಳೆ ಸೋಮವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಹರ್ಷ ಎಂಬುವರಿಗೆ ಸೇರಿದ ನಗರದ ಎಂ.ಜಿ. ರಸ್ತೆಯ ಅಂಗಡಿಗೆ ನವೀಕರಣ ಪರವಾನಗಿ ನೀಡಲು ₹5 ಸಾವಿರ ಬೇಡಿಕೆ ಇಟ್ಟಿದ್ದರು. ಈ ಕುರಿತು ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು. ಲೋಕಾಯುಕ್ತ ಡಿವೈಎಸ್ಪಿ ರವೀಶ್ ಮತ್ತು ತಂಡದ ಅಧಿಕಾರಿಗಳು ಹಣ ಸ್ವೀಕರಿಸುವ ಸಮಯದಲ್ಲಿ ದಾಳಿ ನಡೆಸಿದ್ದರು.