<p><strong>ಮಧುಗಿರಿ</strong>: ತಾಲ್ಲೂಕಿನ ಬಹುತೇಕ ಕೆರೆಗಳು ಸಂಪೂರ್ಣವಾಗಿ ಹೂಳು ತುಂಬಿಕೊಂಡಿದ್ದು, ನೀರು ಸಂಗ್ರಹ ಸಾಮರ್ಥ್ಯ ಕುಸಿದಿದೆ.</p>.<p>ತಾಲ್ಲೂಕಿನಲ್ಲಿ ಸಣ್ಣ ನೀರಾವರಿ ಇಲಾಖೆಗೆ ಸೇರಿದ 56, ಜಿಲ್ಲಾ ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯ 150ಕ್ಕೂ ಕೆರೆಗಳಿವೆ.</p>.<p>ತಾಲ್ಲೂಕು ಸತತ ಬರಗಾಲ ಪೀಡಿತ ಪ್ರದೇಶವಾಗಿದ್ದು, ಈ ಭಾಗದಲ್ಲಿ ಯಾವುದೇ ನೀರಾವರಿ ಯೋಜನೆ ಇಲ್ಲದಿರುವುದರಿಂದ ಜನ ಮತ್ತು ಜಾನುವಾರುಗಳು ಮಳೆಯನ್ನೇ ನಂಬಿ ಬದುಕುವಂತಾಗಿದೆ. </p>.<p>ಮಳೆ ಬಂದರೆ ಮಾತ್ರ ಕೆರೆಯಲ್ಲಿ ನೀರು, ಇಲ್ಲದಿದ್ದರೆ ಕೆರೆಯೂ ಒಣಗಿ ಬರಡಾಗುತ್ತದೆ. ಜನ ಮತ್ತು ಜಾನುವಾರುಗಳು ನೀರಿಗಾಗಿ ದೂರದ ಊರುಗಳಿಗೆ ತೆರಳುವಂತಾಗಿದೆ. </p>.<p>ಮಳೆ ಬಿದ್ದ ನೀರು ಕೆರೆಯಲ್ಲಿ ಶೇಖರಣೆಯಾಗದೆ ಸೀಮಾಂಧ್ರ ಪ್ರದೇಶಕ್ಕೆ ಹರಿದು ಹೋಗುತ್ತಿದೆ. ಇದನ್ನು ಶೇಖರಣೆ ಮಾಡಲು ಅಧಿಕಾರಿಗಳು ಯಾವ ಪ್ರಯತ್ನವೂ ಮಾಡುತ್ತಿಲ್ಲ ಎಂದು ರೈತರು ಆರೋಪಿಸಿದ್ದಾರೆ.</p>.<p>ತಾಲ್ಲೂಕಿನ ಬಹುತೇಕ ಕೆರೆಗಳಲ್ಲಿ ಹೂಳು ತುಂಬಿಕೊಂಡು ಮಳೆಯ ನೀರು ಸಮರ್ಪಕವಾಗಿ ಶೇಖರಣೆಯಾಗುತ್ತಿಲ್ಲ. ಬೇಸಿಗೆ ಬರುವ ಮುನ್ನವೇ ಬಹುತೇಕ ಕೆರೆಗಳಲ್ಲಿ ನೀರು ಕಮರಿಹೋಗುತ್ತವೆ. ಅಂತರ್ಜಲ ಮಟ್ಟ ಕುಸಿದು ಕೊಳವೆ ಬಾವಿಗಳು ಬತ್ತಿ ಕುಡಿಯುವ ನೀರಿಗೆ ಸಮಸ್ಯೆಯಾಗುತ್ತಿದೆ.</p>.<p>ತಾಲ್ಲೂಕಿನ ಕೆರೆಗಳ ಸುತ್ತ ಅನುಪಯುಕ್ತ ಗಿಡಗಳು ಬೆಳೆದಿವೆ. ನಿರ್ವಹಣೆ ಇಲ್ಲದೆ ಸಂಪೂರ್ಣವಾಗಿ ಕೆರೆಯನ್ನು ಆವರಿಸಿಕೊಳ್ಳುತ್ತಿದ್ದರೂ ತೆರವಿಗೆ ಕ್ರಮ ಕೈಗೊಳ್ಳುತ್ತಿಲ್ಲ. ಅನುಪಯುಕ್ತ ಗಿಡಗಳ ಬೇರು ಕೆರೆಯೊಳಗೆ ಇಳಿಯುತ್ತದೆ. ಇಲಿಗಳು ಬಿಲ ತೋಡಿಕೊಂಡು ವಾಸಿಸುವುದರಿಂದ ಕೆರೆಯಲ್ಲಿ ಸಂಗ್ರಹಣೆಯಾದ ನೀರು ಪೋಲಾಗುತ್ತಿದೆ.</p>.<p>ಹೂಳು ಎತ್ತಲು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮುಂದಾದರೆ ಕೆರೆಯಲ್ಲಿ ಮಳೆ ನೀರು ಹೆಚ್ಚು ಸಂಗ್ರಹವಾಗಿ ಅಂತರ್ಜಲ ವೃದ್ಧಿಯಾಗುತ್ತದೆ. ತಾಲ್ಲೂಕಿನ ಜನರ ಆರ್ಥಿಕ ಅಭಿವೃದ್ಧಿಗೂ ಪೂರಕವಾಗುತ್ತದೆ ಎನ್ನುತ್ತಾರೆ ಸ್ಥಳೀಯರು.</p>.<div><blockquote>ಎತ್ತಿನಹೊಳೆ ಮೂಲಕ ತಾಲ್ಲೂಕಿನ 45 ಕೆರೆಗಳಿಗೆ ನೀರು ಹರಿಸಲು ₹285 ಕೋಟಿ ಬಿಡುಗಡೆಯಾಗಿದೆ. ಈಗಾಗಲೇ ಕೆರೆಗಳ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ. </blockquote><span class="attribution">- ಕೆ.ಎನ್.ರಾಜಣ್ಣ, ಶಾಸಕ</span></div>.<div><blockquote>ತಾಲ್ಲೂಕಿನ ಕೆರೆಗಳಲ್ಲಿ ಹೂಳು ತುಂಬಿಕೊಂಡಿರುವುದರಿಂದ ನೀರು ಸಂಗ್ರಹ ಸಾಮರ್ಥ್ಯ ಇಲ್ಲದಂತಾಗಿದೆ. ಕುಡಿಯುವ ನೀರಿಗೆ ಸಮಸ್ಯೆಯಾಗಿದೆ. </blockquote><span class="attribution">- ದೊಡ್ಡಮಾಳಯ್ಯ, ರೈತ</span></div>.<div><blockquote>ಕೆರೆಗಳಲ್ಲಿ ಬೆಳೆದಿರುವ ಅನುಪಯುಕ್ತ ಗಿಡಗಳನ್ನು ತೆರವುಗೊಳಿಸಬೇಕು. ಅಭಿವೃದ್ಧಿಪಡಿಸಿದರೆ ನೀರು ಶೇಖರಣೆಯಾಗಿ ಜನ- ಜಾನುವಾರುಗಳಿಗೆ ಅನುಕೂಲವಾಗುತ್ತದೆ. </blockquote><span class="attribution">- ಮಲ್ಲೇಶ್</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಧುಗಿರಿ</strong>: ತಾಲ್ಲೂಕಿನ ಬಹುತೇಕ ಕೆರೆಗಳು ಸಂಪೂರ್ಣವಾಗಿ ಹೂಳು ತುಂಬಿಕೊಂಡಿದ್ದು, ನೀರು ಸಂಗ್ರಹ ಸಾಮರ್ಥ್ಯ ಕುಸಿದಿದೆ.</p>.<p>ತಾಲ್ಲೂಕಿನಲ್ಲಿ ಸಣ್ಣ ನೀರಾವರಿ ಇಲಾಖೆಗೆ ಸೇರಿದ 56, ಜಿಲ್ಲಾ ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯ 150ಕ್ಕೂ ಕೆರೆಗಳಿವೆ.</p>.<p>ತಾಲ್ಲೂಕು ಸತತ ಬರಗಾಲ ಪೀಡಿತ ಪ್ರದೇಶವಾಗಿದ್ದು, ಈ ಭಾಗದಲ್ಲಿ ಯಾವುದೇ ನೀರಾವರಿ ಯೋಜನೆ ಇಲ್ಲದಿರುವುದರಿಂದ ಜನ ಮತ್ತು ಜಾನುವಾರುಗಳು ಮಳೆಯನ್ನೇ ನಂಬಿ ಬದುಕುವಂತಾಗಿದೆ. </p>.<p>ಮಳೆ ಬಂದರೆ ಮಾತ್ರ ಕೆರೆಯಲ್ಲಿ ನೀರು, ಇಲ್ಲದಿದ್ದರೆ ಕೆರೆಯೂ ಒಣಗಿ ಬರಡಾಗುತ್ತದೆ. ಜನ ಮತ್ತು ಜಾನುವಾರುಗಳು ನೀರಿಗಾಗಿ ದೂರದ ಊರುಗಳಿಗೆ ತೆರಳುವಂತಾಗಿದೆ. </p>.<p>ಮಳೆ ಬಿದ್ದ ನೀರು ಕೆರೆಯಲ್ಲಿ ಶೇಖರಣೆಯಾಗದೆ ಸೀಮಾಂಧ್ರ ಪ್ರದೇಶಕ್ಕೆ ಹರಿದು ಹೋಗುತ್ತಿದೆ. ಇದನ್ನು ಶೇಖರಣೆ ಮಾಡಲು ಅಧಿಕಾರಿಗಳು ಯಾವ ಪ್ರಯತ್ನವೂ ಮಾಡುತ್ತಿಲ್ಲ ಎಂದು ರೈತರು ಆರೋಪಿಸಿದ್ದಾರೆ.</p>.<p>ತಾಲ್ಲೂಕಿನ ಬಹುತೇಕ ಕೆರೆಗಳಲ್ಲಿ ಹೂಳು ತುಂಬಿಕೊಂಡು ಮಳೆಯ ನೀರು ಸಮರ್ಪಕವಾಗಿ ಶೇಖರಣೆಯಾಗುತ್ತಿಲ್ಲ. ಬೇಸಿಗೆ ಬರುವ ಮುನ್ನವೇ ಬಹುತೇಕ ಕೆರೆಗಳಲ್ಲಿ ನೀರು ಕಮರಿಹೋಗುತ್ತವೆ. ಅಂತರ್ಜಲ ಮಟ್ಟ ಕುಸಿದು ಕೊಳವೆ ಬಾವಿಗಳು ಬತ್ತಿ ಕುಡಿಯುವ ನೀರಿಗೆ ಸಮಸ್ಯೆಯಾಗುತ್ತಿದೆ.</p>.<p>ತಾಲ್ಲೂಕಿನ ಕೆರೆಗಳ ಸುತ್ತ ಅನುಪಯುಕ್ತ ಗಿಡಗಳು ಬೆಳೆದಿವೆ. ನಿರ್ವಹಣೆ ಇಲ್ಲದೆ ಸಂಪೂರ್ಣವಾಗಿ ಕೆರೆಯನ್ನು ಆವರಿಸಿಕೊಳ್ಳುತ್ತಿದ್ದರೂ ತೆರವಿಗೆ ಕ್ರಮ ಕೈಗೊಳ್ಳುತ್ತಿಲ್ಲ. ಅನುಪಯುಕ್ತ ಗಿಡಗಳ ಬೇರು ಕೆರೆಯೊಳಗೆ ಇಳಿಯುತ್ತದೆ. ಇಲಿಗಳು ಬಿಲ ತೋಡಿಕೊಂಡು ವಾಸಿಸುವುದರಿಂದ ಕೆರೆಯಲ್ಲಿ ಸಂಗ್ರಹಣೆಯಾದ ನೀರು ಪೋಲಾಗುತ್ತಿದೆ.</p>.<p>ಹೂಳು ಎತ್ತಲು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮುಂದಾದರೆ ಕೆರೆಯಲ್ಲಿ ಮಳೆ ನೀರು ಹೆಚ್ಚು ಸಂಗ್ರಹವಾಗಿ ಅಂತರ್ಜಲ ವೃದ್ಧಿಯಾಗುತ್ತದೆ. ತಾಲ್ಲೂಕಿನ ಜನರ ಆರ್ಥಿಕ ಅಭಿವೃದ್ಧಿಗೂ ಪೂರಕವಾಗುತ್ತದೆ ಎನ್ನುತ್ತಾರೆ ಸ್ಥಳೀಯರು.</p>.<div><blockquote>ಎತ್ತಿನಹೊಳೆ ಮೂಲಕ ತಾಲ್ಲೂಕಿನ 45 ಕೆರೆಗಳಿಗೆ ನೀರು ಹರಿಸಲು ₹285 ಕೋಟಿ ಬಿಡುಗಡೆಯಾಗಿದೆ. ಈಗಾಗಲೇ ಕೆರೆಗಳ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ. </blockquote><span class="attribution">- ಕೆ.ಎನ್.ರಾಜಣ್ಣ, ಶಾಸಕ</span></div>.<div><blockquote>ತಾಲ್ಲೂಕಿನ ಕೆರೆಗಳಲ್ಲಿ ಹೂಳು ತುಂಬಿಕೊಂಡಿರುವುದರಿಂದ ನೀರು ಸಂಗ್ರಹ ಸಾಮರ್ಥ್ಯ ಇಲ್ಲದಂತಾಗಿದೆ. ಕುಡಿಯುವ ನೀರಿಗೆ ಸಮಸ್ಯೆಯಾಗಿದೆ. </blockquote><span class="attribution">- ದೊಡ್ಡಮಾಳಯ್ಯ, ರೈತ</span></div>.<div><blockquote>ಕೆರೆಗಳಲ್ಲಿ ಬೆಳೆದಿರುವ ಅನುಪಯುಕ್ತ ಗಿಡಗಳನ್ನು ತೆರವುಗೊಳಿಸಬೇಕು. ಅಭಿವೃದ್ಧಿಪಡಿಸಿದರೆ ನೀರು ಶೇಖರಣೆಯಾಗಿ ಜನ- ಜಾನುವಾರುಗಳಿಗೆ ಅನುಕೂಲವಾಗುತ್ತದೆ. </blockquote><span class="attribution">- ಮಲ್ಲೇಶ್</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>