ನಿತ್ಯವೂ ಐದರಿಂದ ಹತ್ತು ಪ್ರಕರಣ ವರದಿಯಾಗುತ್ತಿವೆ. ಬ್ಯಾಂಕ್ ಅಧಿಕಾರಿಗಳು ಗ್ರಾಹಕರಿಂದ ದೂರು ಪಡೆದು ವಿಮಾ ಕಂಪನಿಯಿಂದ ಹಣ ಕೊಡಿಸುವ ಭರವಸೆ ನೀಡುತ್ತಿದ್ದಾರೆ. ತಾಲ್ಲೂಕು ಪಂಚಾಯಿತಿ ಎದುರಿನ ಕೆನರಾ ಬ್ಯಾಂಕ್ ಎಟಿಎಂ ಬಳಕೆ ಮಾಡಿದ ಗ್ರಾಹಕರ ಖಾತೆಗೆ ಕನ್ನ ಹಾಕಿರುವುದು ಖಚಿತವಾಗಿದೆ. ಈ ಎಟಿಎಂ ಕೇಂದ್ರದಲ್ಲಿ ಯಾವುದೇ ಕಾವಲುಗಾರನನ್ನು ನೇಮಿಸಿಲ್ಲ. ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಕೆಯಾಗಿದ್ದರೂ ಅಪರಾಧಿಗಳನ್ನು ಪತ್ತೆಹಚ್ಚಿಲ್ಲ ಎನ್ನುವುದು ಗ್ರಾಹಕರ ದೂರು.