ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದ ಪರವಾಗಿ ಲಕ್ಷ್ಮಣ ಸವದಿ ಪ್ರಶಸ್ತಿ ಸ್ವೀಕಾರ

Last Updated 1 ಜನವರಿ 2020, 14:27 IST
ಅಕ್ಷರ ಗಾತ್ರ

ತುಮಕೂರು: ರಾಜ್ಯವು ಕೃಷಿ ಕರ್ಮಣ್ಯ ಪ್ರಶಸ್ತಿ ಪಡೆದಿದ್ದು ರಾಜ್ಯದ ಪರವಾಗಿ ಉಪಮುಖ್ಯಮಂತ್ರಿಯೂ ಆದ ಕೃಷಿ ಸಚಿವ ಲಕ್ಷ್ಮಣ ಸವದಿ ಪ್ರಶಸ್ತಿ ಸ್ವೀಕರಿಸುವರು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಗುರುವಾರ ನಡೆಯಲಿರುವ ಕೃಷಿ ಸಮ್ಮಾನ್ ಕಾರ್ಯಕ್ರಮದಲ್ಲಿ 16 ಮಹಿಳಾ ರೈತರು ಹಾಗೂ 16 ಪುರುಷ ರೈತರಿಗೆ ಕೃಷಿ ಕರ್ಮಣ್ಯ ಪ್ರಶಸ್ತಿಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರದಾನ ಮಾಡುವರು ಎಂದರು.

ಕೇಂದ್ರ ಕೃಷಿ ಇಲಾಖೆಯಿಂದ ಕಾರ್ಯಕ್ರಮ ಆಯೋಜಿಸಲಾಗಿದೆ. 3 ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ 12 ರಾಜ್ಯದ ಕೃಷಿ ಸಚಿವರು ಭಾಗವಹಿಸುವ ಸಾಧ್ಯತೆ ಇದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT