<p><strong>ಮಧುಗಿರಿ:</strong> ಪುರಸಭೆ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಲಾಲಾಪೇಟೆ ಮಂಜುನಾಥ್ ಹಾಗೂ ಉಪಾಧ್ಯಕ್ಷರಾಗಿ ಸುಜಾತ ಎಂ.ಎಸ್.ಶಂಕರನಾರಾಯಣ ಅವಿರೋಧವಾಗಿ ಶನಿವಾರ ಆಯ್ಕೆಯಾದರು.</p>.<p>ಜೆಡಿಎಸ್ನಿಂದ ಪುರಸಭೆ ಸದಸ್ಯರಾಗಿ ಆಯ್ಕೆಯಾಗಿದ್ದ ಲಾಲಾಪೇಟೆ ಮಂಜುನಾಥ್ ಅವರು, ಜೆಡಿಎಸ್ ತ್ಯಜಿಸಿ ಕೆ.ಎನ್.ರಾಜಣ್ಣ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಅಂದಿನಿಂದಲೂ ಕಾಂಗ್ರೆಸ್ ನಿಷ್ಠಾವಂತರಾಗಿದ್ದ ಲಾಲಾಪೇಟೆ ಮಂಜುನಾಥ್ ಪುರಸಭೆ ಅಧ್ಯಕ್ಷರಾಗಿ ಆಯ್ಕೆಯಾದರು.</p>.<p>ಚುನಾವಣಾಧಿಕಾರಿಯಾಗಿ ಉಪವಿಭಾಗಾಧಿಕಾರಿ ಗೋಟೊರು ಶಿವಪ್ಪ ಕಾರ್ಯನಿರ್ವಹಿಸಿದರು.</p>.<p>ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ಮಾತನಾಡಿ, ‘ಎಲ್ಲ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಬೇಕೆಂಬ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ ಆಶಯದಂತೆ ಪುರಸಭೆಯಲ್ಲಿ ಕುಂಚಿಟಿಗ ಸಮುದಾಯಕ್ಕೆ ಸೇರಿದ ಲಾಲಾಪೇಟೆ ಮಂಜುನಾಥ್ ಅವರನ್ನು ಆಯ್ಕೆ ಮಾಡಲಾಗಿದೆ. ಪಟ್ಟಣದ ಅಭಿವೃದ್ಧಿಗಾಗಿ ₹25 ಕೋಟಿ, ರಾಜೀವ್ ಗಾಂಧಿ ಕ್ರೀಡಾಂಗಣ ಅಭಿವೃದ್ಧಿಗೆ ₹10 ಕೋಟಿ, 500 ಮನೆಗಳು ಮಂಜೂರಾಗಿದ್ದು, ತಾಲ್ಲೂಕಿಗೆ 4 ಸಾವಿರ ಮನೆಗಳು ಮಂಜೂರಾಗಿವೆ’ ಎಂದರು.</p>.<p>ಮನೆಗಳನ್ನು ಹಂಚಿಕೆ ಮಾಡುವಾಗ ಪಕ್ಷಾತೀತ ಮತ್ತು ಬಡವರಿಗೆ ವಿವರಣೆ ಮಾಡಬೇಕು. ದೊಡ್ಡೇರಿ ಹೋಬಳಿ ಎಂಟು ಕೆರೆಗಳಿಗೆ ಎತ್ತಿನಹೊಳೆ ಯೋಜನೆಯಡಿ ನೀರು ತುಂಬಿಸಲು ₹116 ಕೋಟಿ ಬಿಡುಗಡೆಯಾಗಿದೆ ಎಂದರು.</p>.<p>ಲಾಲಾಪೇಟೆ ಮಂಜುನಾಥ್ ಮಾತನಾಡಿ, ‘ಪಟ್ಟಣದ ಅಭಿವೃದ್ಧಿಗೆ ಎಲ್ಲ ಸದಸ್ಯರ ವಿಶ್ವಾಸದೊಂದಿಗೆ ಉತ್ತಮವಾದ ಕೆಲಸ- ಕಾರ್ಯ ಮಾಡುತ್ತೇನೆ’ ಎಂದು ತಿಳಿಸಿದರು.</p>.<p>ಪುರಸಭೆ ಉಪಾಧ್ಯಕ್ಷ ಸುಜಾತ ಎಂ.ಎಸ್.ಶಂಕರನಾರಾಯಣ, ಪುರಸಭೆ ಮಾಜಿ ಅಧ್ಯಕ್ಷ ಎಂ.ಕೆ.ನಂಜುಂಡಯ್ಯ, ಎನ್.ಗಂಗಣ್ಣ, ಎಂ.ವಿ.ಗೋವಿಂದರಾಜು, ಅಯೂಬ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆದಿನಾರಾಯಣ ರೆಡ್ಡಿ, ಗೋಪಾಲಯ್ಯ, ಜಿ.ಪಂ.ಮಾಜಿ ಅಧ್ಯಕ್ಷ ಜಿ.ಜೆ.ರಾಜಣ್ಣ, ನಿರ್ದೇಶಕ ಬಿ.ನಾಗೇಶಬಾಬು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಧುಗಿರಿ:</strong> ಪುರಸಭೆ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಲಾಲಾಪೇಟೆ ಮಂಜುನಾಥ್ ಹಾಗೂ ಉಪಾಧ್ಯಕ್ಷರಾಗಿ ಸುಜಾತ ಎಂ.ಎಸ್.ಶಂಕರನಾರಾಯಣ ಅವಿರೋಧವಾಗಿ ಶನಿವಾರ ಆಯ್ಕೆಯಾದರು.</p>.<p>ಜೆಡಿಎಸ್ನಿಂದ ಪುರಸಭೆ ಸದಸ್ಯರಾಗಿ ಆಯ್ಕೆಯಾಗಿದ್ದ ಲಾಲಾಪೇಟೆ ಮಂಜುನಾಥ್ ಅವರು, ಜೆಡಿಎಸ್ ತ್ಯಜಿಸಿ ಕೆ.ಎನ್.ರಾಜಣ್ಣ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಅಂದಿನಿಂದಲೂ ಕಾಂಗ್ರೆಸ್ ನಿಷ್ಠಾವಂತರಾಗಿದ್ದ ಲಾಲಾಪೇಟೆ ಮಂಜುನಾಥ್ ಪುರಸಭೆ ಅಧ್ಯಕ್ಷರಾಗಿ ಆಯ್ಕೆಯಾದರು.</p>.<p>ಚುನಾವಣಾಧಿಕಾರಿಯಾಗಿ ಉಪವಿಭಾಗಾಧಿಕಾರಿ ಗೋಟೊರು ಶಿವಪ್ಪ ಕಾರ್ಯನಿರ್ವಹಿಸಿದರು.</p>.<p>ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ಮಾತನಾಡಿ, ‘ಎಲ್ಲ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಬೇಕೆಂಬ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ ಆಶಯದಂತೆ ಪುರಸಭೆಯಲ್ಲಿ ಕುಂಚಿಟಿಗ ಸಮುದಾಯಕ್ಕೆ ಸೇರಿದ ಲಾಲಾಪೇಟೆ ಮಂಜುನಾಥ್ ಅವರನ್ನು ಆಯ್ಕೆ ಮಾಡಲಾಗಿದೆ. ಪಟ್ಟಣದ ಅಭಿವೃದ್ಧಿಗಾಗಿ ₹25 ಕೋಟಿ, ರಾಜೀವ್ ಗಾಂಧಿ ಕ್ರೀಡಾಂಗಣ ಅಭಿವೃದ್ಧಿಗೆ ₹10 ಕೋಟಿ, 500 ಮನೆಗಳು ಮಂಜೂರಾಗಿದ್ದು, ತಾಲ್ಲೂಕಿಗೆ 4 ಸಾವಿರ ಮನೆಗಳು ಮಂಜೂರಾಗಿವೆ’ ಎಂದರು.</p>.<p>ಮನೆಗಳನ್ನು ಹಂಚಿಕೆ ಮಾಡುವಾಗ ಪಕ್ಷಾತೀತ ಮತ್ತು ಬಡವರಿಗೆ ವಿವರಣೆ ಮಾಡಬೇಕು. ದೊಡ್ಡೇರಿ ಹೋಬಳಿ ಎಂಟು ಕೆರೆಗಳಿಗೆ ಎತ್ತಿನಹೊಳೆ ಯೋಜನೆಯಡಿ ನೀರು ತುಂಬಿಸಲು ₹116 ಕೋಟಿ ಬಿಡುಗಡೆಯಾಗಿದೆ ಎಂದರು.</p>.<p>ಲಾಲಾಪೇಟೆ ಮಂಜುನಾಥ್ ಮಾತನಾಡಿ, ‘ಪಟ್ಟಣದ ಅಭಿವೃದ್ಧಿಗೆ ಎಲ್ಲ ಸದಸ್ಯರ ವಿಶ್ವಾಸದೊಂದಿಗೆ ಉತ್ತಮವಾದ ಕೆಲಸ- ಕಾರ್ಯ ಮಾಡುತ್ತೇನೆ’ ಎಂದು ತಿಳಿಸಿದರು.</p>.<p>ಪುರಸಭೆ ಉಪಾಧ್ಯಕ್ಷ ಸುಜಾತ ಎಂ.ಎಸ್.ಶಂಕರನಾರಾಯಣ, ಪುರಸಭೆ ಮಾಜಿ ಅಧ್ಯಕ್ಷ ಎಂ.ಕೆ.ನಂಜುಂಡಯ್ಯ, ಎನ್.ಗಂಗಣ್ಣ, ಎಂ.ವಿ.ಗೋವಿಂದರಾಜು, ಅಯೂಬ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆದಿನಾರಾಯಣ ರೆಡ್ಡಿ, ಗೋಪಾಲಯ್ಯ, ಜಿ.ಪಂ.ಮಾಜಿ ಅಧ್ಯಕ್ಷ ಜಿ.ಜೆ.ರಾಜಣ್ಣ, ನಿರ್ದೇಶಕ ಬಿ.ನಾಗೇಶಬಾಬು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>