<p>ತುಮಕೂರು: ‘ನಿವೇಶನ ಹಂಚಿಕೆ, ಅಗತ್ಯ ಸೌಲಭ್ಯ ಕಲ್ಪಿಸಲು ಕ್ರಮ ವಹಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭರವಸೆ ನೀಡಿದ ನಂತರ ಒಂದು ವಾರದಿಂದ ನಡೆಯುತ್ತಿದ್ದ ಅಹೋರಾತ್ರಿ ಧರಣಿಯನ್ನು ಬುಧವಾರ ಕೈ ಬಿಡಲಾಯಿತು.</p>.<p>ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಜೂನ್ 18ರಂದು ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿಯಿಂದ ಧರಣಿ ಆರಂಭಿಸಲಾಗಿತ್ತು. ಕೊರಟಗೆರೆ ತಾಲ್ಲೂಕಿನ ಇರಕಸಂದ್ರ ಕಾಲೊನಿ, ಹೊಳವನಹಳ್ಳಿ ಗ್ರಾಮಗಳ ಗುಡಿಸಲು ವಾಸಿಗಳು ನೀರು, ವಿದ್ಯುತ್, ನಿವೇಶನ, ವಸತಿಗಾಗಿ ಬೀದಿಗೆ ಬಂದಿದ್ದರು.</p>.<p>‘ಅರ್ಹರಿಗೆ ನಿವೇಶನ ಸೌಲಭ್ಯ ಕಲ್ಪಿಸಲು ಜಿಲ್ಲೆಯಲ್ಲಿ ಈವರೆಗೂ 2 ಸಾವಿರ ಎಕರೆ ಪ್ರದೇಶ ಗುರುತಿಸಲಾಗಿದೆ. ಇದರಿಂದ ಸುಮಾರು 30 ಸಾವಿರ ನಿವೇಶನ ಹಂಚಿಕೆ ಮಾಡಬಹುದು. ಎಲ್ಲ ತಾಲೂಕಿನಲ್ಲಿ ಆಶ್ರಯ ಸಮಿತಿ ಸಭೆ ನಡೆಸಿ ಪಾರದರ್ಶಕವಾಗಿ, ವ್ಯವಸ್ಥಿತವಾಗಿ ನಿವೇಶನ ಹಂಚಿಕೆ ಮಾಡಲಾಗುವುದು’ ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದರು.</p>.<p>‘ಮಧುಗಿರಿ ತಾಲ್ಲೂಕಿನಲ್ಲಿ 10 ತಿಂಗಳು ಕಳೆದರೂ ಆಶ್ರಯ ಸಮಿತಿ ಸಭೆ ನಡೆದಿಲ್ಲ. ಜುಲೈ 5ರಂದು ಸಮಿತಿ ಸಭೆ ನಡೆಸಿ ನಿವೇಶನ ವಂಚಿತ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿ ಪಟ್ಟಿ ಸಲ್ಲಿಸಬೇಕು’ ಎಂದು ಸೂಚಿಸಿದ್ದಾರೆ.</p>.<p>ಹೋರಾಟ ಸಮಿತಿ ಜಿಲ್ಲಾ ಸಂಚಾಲಕ ಹಂದ್ರಾಳ್ ನಾಗಭೂಷಣ್, ‘ತುಮಕೂರು, ಮಧುಗಿರಿ, ಕೊರಟಗೆರೆ ತಾಲ್ಲೂಕಿನ ಕೆಲ ಗ್ರಾಮಗಳಲ್ಲಿ ಮೂರು ತಲೆಮಾರುಗಳಿಂದ ವಾಸವಿರುವ ಜನರಿಗೆ ಅಗತ್ಯ ಸೌಲಭ್ಯ ಕಲ್ಪಿಸಿಲ್ಲ. ಅರ್ಹರಿಗೆ ನಿವೇಶನ, ಸಾಗುವಳಿ ಚೀಟಿ, ಖಾತೆ, ಪಹಣಿ ಸೌಲಭ್ಯ ಕಲ್ಪಿಸಬೇಕು’ ಎಂದು ಒತ್ತಾಯಿಸಿದರು.</p>.<p>ಜಿ.ಪಂ ಸಿಇಒ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎಸ್.ಕೃಷ್ಣಪ್ಪ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ‘ನಿವೇಶನ ಹಂಚಿಕೆ, ಅಗತ್ಯ ಸೌಲಭ್ಯ ಕಲ್ಪಿಸಲು ಕ್ರಮ ವಹಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭರವಸೆ ನೀಡಿದ ನಂತರ ಒಂದು ವಾರದಿಂದ ನಡೆಯುತ್ತಿದ್ದ ಅಹೋರಾತ್ರಿ ಧರಣಿಯನ್ನು ಬುಧವಾರ ಕೈ ಬಿಡಲಾಯಿತು.</p>.<p>ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಜೂನ್ 18ರಂದು ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿಯಿಂದ ಧರಣಿ ಆರಂಭಿಸಲಾಗಿತ್ತು. ಕೊರಟಗೆರೆ ತಾಲ್ಲೂಕಿನ ಇರಕಸಂದ್ರ ಕಾಲೊನಿ, ಹೊಳವನಹಳ್ಳಿ ಗ್ರಾಮಗಳ ಗುಡಿಸಲು ವಾಸಿಗಳು ನೀರು, ವಿದ್ಯುತ್, ನಿವೇಶನ, ವಸತಿಗಾಗಿ ಬೀದಿಗೆ ಬಂದಿದ್ದರು.</p>.<p>‘ಅರ್ಹರಿಗೆ ನಿವೇಶನ ಸೌಲಭ್ಯ ಕಲ್ಪಿಸಲು ಜಿಲ್ಲೆಯಲ್ಲಿ ಈವರೆಗೂ 2 ಸಾವಿರ ಎಕರೆ ಪ್ರದೇಶ ಗುರುತಿಸಲಾಗಿದೆ. ಇದರಿಂದ ಸುಮಾರು 30 ಸಾವಿರ ನಿವೇಶನ ಹಂಚಿಕೆ ಮಾಡಬಹುದು. ಎಲ್ಲ ತಾಲೂಕಿನಲ್ಲಿ ಆಶ್ರಯ ಸಮಿತಿ ಸಭೆ ನಡೆಸಿ ಪಾರದರ್ಶಕವಾಗಿ, ವ್ಯವಸ್ಥಿತವಾಗಿ ನಿವೇಶನ ಹಂಚಿಕೆ ಮಾಡಲಾಗುವುದು’ ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದರು.</p>.<p>‘ಮಧುಗಿರಿ ತಾಲ್ಲೂಕಿನಲ್ಲಿ 10 ತಿಂಗಳು ಕಳೆದರೂ ಆಶ್ರಯ ಸಮಿತಿ ಸಭೆ ನಡೆದಿಲ್ಲ. ಜುಲೈ 5ರಂದು ಸಮಿತಿ ಸಭೆ ನಡೆಸಿ ನಿವೇಶನ ವಂಚಿತ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿ ಪಟ್ಟಿ ಸಲ್ಲಿಸಬೇಕು’ ಎಂದು ಸೂಚಿಸಿದ್ದಾರೆ.</p>.<p>ಹೋರಾಟ ಸಮಿತಿ ಜಿಲ್ಲಾ ಸಂಚಾಲಕ ಹಂದ್ರಾಳ್ ನಾಗಭೂಷಣ್, ‘ತುಮಕೂರು, ಮಧುಗಿರಿ, ಕೊರಟಗೆರೆ ತಾಲ್ಲೂಕಿನ ಕೆಲ ಗ್ರಾಮಗಳಲ್ಲಿ ಮೂರು ತಲೆಮಾರುಗಳಿಂದ ವಾಸವಿರುವ ಜನರಿಗೆ ಅಗತ್ಯ ಸೌಲಭ್ಯ ಕಲ್ಪಿಸಿಲ್ಲ. ಅರ್ಹರಿಗೆ ನಿವೇಶನ, ಸಾಗುವಳಿ ಚೀಟಿ, ಖಾತೆ, ಪಹಣಿ ಸೌಲಭ್ಯ ಕಲ್ಪಿಸಬೇಕು’ ಎಂದು ಒತ್ತಾಯಿಸಿದರು.</p>.<p>ಜಿ.ಪಂ ಸಿಇಒ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎಸ್.ಕೃಷ್ಣಪ್ಪ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>