<p><strong>ಕುಣಿಗಲ್</strong>: ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಗುರುವಾರ ಮುಂಜಾನೆ ಅತಿ ವೇಗದಿಂದ ಬಂದ ಲಾರಿ ರಸ್ತೆಯಲ್ಲಿದ್ದ ಬ್ಯಾರಿಕೇಡ್ಗಳಿಗೆ ಡಿಕ್ಕಿ ಹೊಡೆದು ಚಕ್ಪೋಸ್ಟ್ ಮೇಲೆ ಹರಿದಿದೆ. ನಂತರ ಎದುರಿಗೆ ಬರುತ್ತಿದ್ದ ಕ್ಯಾಂಟರ್ಗೆ ಡಿಕ್ಕಿ ಹೊಡೆದ ಪರಿಣಾಮ ಐದು ಜನರು ತೀವ್ರ ಗಾಯಗೊಂಡಿದ್ದಾರೆ.</p>.<p>ಲಾರಿ ಚಾಲಕ ನವೀನ್, ಕ್ಲೀನರ್ ಪ್ರವೀಣ್, ಪುಟ್ಟರಾಜು, ಕ್ಯಾಂಟರ್ ಚಾಲಕ ಕಿರಣ್ನ ಕಾಲುಗಳು ಮುರಿದಿವೆ. ಚಕ್ಪೋಸ್ಟ್ನಲ್ಲಿದ್ದ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ.</p>.<p>ಪಾನಮತ್ತನಾಗಿದ್ದ ಚಾಲಕ ನವೀನ್, ಹಾಸನ ಕಡೆಯಿಂದ ಲಾರಿಯನ್ನು ಅತಿವೇಗದಿಂದ ಚಾಲನೆ ಮಾಡಿಕೊಂಡು ಬಂದು ನಿಯಂತ್ರಿಸಲಾಗದೆ ಬ್ಯಾರಿಕೇಡ್ಗೆ ಡಿಕ್ಕಿ ಹೊಡೆದಿದೆ. ನಂತರ ಎಡೆಯೂರಿನ ಚಕ್ ಪೋಸ್ಟ್ ಮೇಲೆ ಹರಿದಿದೆ. ಸದ್ದು ಕೇಳಿದ ಸಿಬ್ಬಂದಿ ಚಕ್ಪೋಸ್ಟ್ನಿಂದ ಹೊರಬಂದಿದ್ದಾರೆ</p>.<p>ಚೆಕ್ಪೋಸ್ಟ್ನಲ್ಲಿದ್ದ ಸಿಸಿ ಟಿವಿ ಕ್ಯಾಮೆರಾ, ಕಂಪ್ಯೂಟರ್, ಯುಪಿಎಸ್ ಸೇರಿದಂತೆ ಅಂದಾಜು ₹ 1 ಲಕ್ಷ ಮೌಲ್ಯದ ವಸ್ತುಗಳು ಹಾಳಾಗಿದೆ ಎಂದು ಅಂದಾಜಿಸಲಾಗಿದೆ.</p>.<p>ಸ್ಥಳಕ್ಕೆ ತಹಶೀಲ್ದಾರ್ ವಿಶ್ವನಾಥ್, ಡಿವೈಎಸ್ಪಿ ಜಗದೀಶ್, ಸಿಪಿಐ ನಿರಂಜನ್ ಕುಮಾರ್ ಭೇಟಿ ನೀಡಿದ್ದರು. ಅಮೃತೂರು ಪಿಎಸ್ಐ ಮಂಜು ಪ್ರಕರಣ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಣಿಗಲ್</strong>: ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಗುರುವಾರ ಮುಂಜಾನೆ ಅತಿ ವೇಗದಿಂದ ಬಂದ ಲಾರಿ ರಸ್ತೆಯಲ್ಲಿದ್ದ ಬ್ಯಾರಿಕೇಡ್ಗಳಿಗೆ ಡಿಕ್ಕಿ ಹೊಡೆದು ಚಕ್ಪೋಸ್ಟ್ ಮೇಲೆ ಹರಿದಿದೆ. ನಂತರ ಎದುರಿಗೆ ಬರುತ್ತಿದ್ದ ಕ್ಯಾಂಟರ್ಗೆ ಡಿಕ್ಕಿ ಹೊಡೆದ ಪರಿಣಾಮ ಐದು ಜನರು ತೀವ್ರ ಗಾಯಗೊಂಡಿದ್ದಾರೆ.</p>.<p>ಲಾರಿ ಚಾಲಕ ನವೀನ್, ಕ್ಲೀನರ್ ಪ್ರವೀಣ್, ಪುಟ್ಟರಾಜು, ಕ್ಯಾಂಟರ್ ಚಾಲಕ ಕಿರಣ್ನ ಕಾಲುಗಳು ಮುರಿದಿವೆ. ಚಕ್ಪೋಸ್ಟ್ನಲ್ಲಿದ್ದ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ.</p>.<p>ಪಾನಮತ್ತನಾಗಿದ್ದ ಚಾಲಕ ನವೀನ್, ಹಾಸನ ಕಡೆಯಿಂದ ಲಾರಿಯನ್ನು ಅತಿವೇಗದಿಂದ ಚಾಲನೆ ಮಾಡಿಕೊಂಡು ಬಂದು ನಿಯಂತ್ರಿಸಲಾಗದೆ ಬ್ಯಾರಿಕೇಡ್ಗೆ ಡಿಕ್ಕಿ ಹೊಡೆದಿದೆ. ನಂತರ ಎಡೆಯೂರಿನ ಚಕ್ ಪೋಸ್ಟ್ ಮೇಲೆ ಹರಿದಿದೆ. ಸದ್ದು ಕೇಳಿದ ಸಿಬ್ಬಂದಿ ಚಕ್ಪೋಸ್ಟ್ನಿಂದ ಹೊರಬಂದಿದ್ದಾರೆ</p>.<p>ಚೆಕ್ಪೋಸ್ಟ್ನಲ್ಲಿದ್ದ ಸಿಸಿ ಟಿವಿ ಕ್ಯಾಮೆರಾ, ಕಂಪ್ಯೂಟರ್, ಯುಪಿಎಸ್ ಸೇರಿದಂತೆ ಅಂದಾಜು ₹ 1 ಲಕ್ಷ ಮೌಲ್ಯದ ವಸ್ತುಗಳು ಹಾಳಾಗಿದೆ ಎಂದು ಅಂದಾಜಿಸಲಾಗಿದೆ.</p>.<p>ಸ್ಥಳಕ್ಕೆ ತಹಶೀಲ್ದಾರ್ ವಿಶ್ವನಾಥ್, ಡಿವೈಎಸ್ಪಿ ಜಗದೀಶ್, ಸಿಪಿಐ ನಿರಂಜನ್ ಕುಮಾರ್ ಭೇಟಿ ನೀಡಿದ್ದರು. ಅಮೃತೂರು ಪಿಎಸ್ಐ ಮಂಜು ಪ್ರಕರಣ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>