<p><strong>ತುಮಕೂರು</strong>: ಎಂಜಿನಿಯರ್ಸ್ ಅಸೋಸಿಯೇಷನ್, ಯು.ಎಸ್.ಕಮ್ಯನಿಕೇಷನ್ ಸಹಯೋಗದಲ್ಲಿ ನಗರ ಗಾಜಿನ ಮನೆಯಲ್ಲಿ ಹಮ್ಮಿಕೊಂಡಿರುವ ‘ಬಿಲ್ಡ್ಟೆಕ್’ ವಸ್ತು ಪ್ರದರ್ಶನಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಶುಕ್ರವಾರ ಚಾಲನೆ ನೀಡಿದರು.</p>.<p>ಒಂದೇ ಸೂರಿನಡಿ ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ಎಲ್ಲ ವಸ್ತು, ತಾಂತ್ರಿಕ ಸಲಹೆ ನೀಡುವ ಉದ್ದೇಶದಿಂದ ಏರ್ಪಡಿಸಿರುವ ವಸ್ತು ಪ್ರದರ್ಶನ ಗ್ರಾಹಕ ಸ್ನೇಹಿಯಾಗಿದೆ ಎಂದು ಜ್ಯೋತಿಗಣೇಶ್ ಹೇಳಿದರು.</p>.<p>ಗಾಜಿನ ಮನೆ ಹಲವು ನ್ಯೂನತೆಗಳಿಂದ ಕೂಡಿದೆ. ಟೂಡಾ, ಜಿಲ್ಲಾಡಳಿತ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಿದರೆ ನಾವು ಕೈಜೋಡಿಸುತ್ತೇವೆ ಎಂದರು.</p>.<p>ಜಿ.ಪಂ ಸಿಇಒ ಜಿ.ಪ್ರಭು, ‘ಕಡಿಮೆ ಖರ್ಚಿನಲ್ಲಿ ಗುಣಮಟ್ಟದ ಸೌಲಭ್ಯ ಒದಗಿಸುವುದು ಎಂಜಿನಿಯರುಗಳ ಮುಂದಿರುವ ಸವಾಲು. ಈ ಕುರಿತು ಹೆಚ್ಚಿನ ಸಂಶೋಧನೆಗಳು ನಡೆಯಬೇಕು’ ಎಂದು ಸಲಹೆ ಮಾಡಿದರು.</p>.<p>ಎಂಜಿನಿಯರ್ಸ್ ಅಸೋಸಿಯೇಷನ್ ಅಧ್ಯಕ್ಷ ಎನ್.ವಿ.ರಾಮಮೂರ್ತಿ, ಉಪಾಧ್ಯಕ್ಷ ಎಚ್.ಕೆ.ನಟೇಶ್, ಕಾರ್ಯದರ್ಶಿ ಎಂ.ಡಿ.ರಾಜು, ಸಹ ಕಾರ್ಯದರ್ಶಿ ಮಂಗಳಕುಮಾರ್, ಖಜಾಂಚಿ ವೆಂಕಟೇಶ್, ನಿರ್ದೇಶಕರಾದ ಎ.ಸತೀಶ, ರವಿಕುಮಾರ್, ಶ್ರೀಕಂಠಸ್ವಾಮಿ, ಮುಖಂಡರಾದ ಎಸ್.ಪಿ.ಚಿದಾನಂದ್, ಎಂ.ಕೆ.ನಾಗರಾಜರಾವ್, ಆರ್.ಬಸಣ್ಣ, ಮುಕೇಶ್ ಪಾಟೀಲ್ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಎಂಜಿನಿಯರ್ಸ್ ಅಸೋಸಿಯೇಷನ್, ಯು.ಎಸ್.ಕಮ್ಯನಿಕೇಷನ್ ಸಹಯೋಗದಲ್ಲಿ ನಗರ ಗಾಜಿನ ಮನೆಯಲ್ಲಿ ಹಮ್ಮಿಕೊಂಡಿರುವ ‘ಬಿಲ್ಡ್ಟೆಕ್’ ವಸ್ತು ಪ್ರದರ್ಶನಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಶುಕ್ರವಾರ ಚಾಲನೆ ನೀಡಿದರು.</p>.<p>ಒಂದೇ ಸೂರಿನಡಿ ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ಎಲ್ಲ ವಸ್ತು, ತಾಂತ್ರಿಕ ಸಲಹೆ ನೀಡುವ ಉದ್ದೇಶದಿಂದ ಏರ್ಪಡಿಸಿರುವ ವಸ್ತು ಪ್ರದರ್ಶನ ಗ್ರಾಹಕ ಸ್ನೇಹಿಯಾಗಿದೆ ಎಂದು ಜ್ಯೋತಿಗಣೇಶ್ ಹೇಳಿದರು.</p>.<p>ಗಾಜಿನ ಮನೆ ಹಲವು ನ್ಯೂನತೆಗಳಿಂದ ಕೂಡಿದೆ. ಟೂಡಾ, ಜಿಲ್ಲಾಡಳಿತ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಿದರೆ ನಾವು ಕೈಜೋಡಿಸುತ್ತೇವೆ ಎಂದರು.</p>.<p>ಜಿ.ಪಂ ಸಿಇಒ ಜಿ.ಪ್ರಭು, ‘ಕಡಿಮೆ ಖರ್ಚಿನಲ್ಲಿ ಗುಣಮಟ್ಟದ ಸೌಲಭ್ಯ ಒದಗಿಸುವುದು ಎಂಜಿನಿಯರುಗಳ ಮುಂದಿರುವ ಸವಾಲು. ಈ ಕುರಿತು ಹೆಚ್ಚಿನ ಸಂಶೋಧನೆಗಳು ನಡೆಯಬೇಕು’ ಎಂದು ಸಲಹೆ ಮಾಡಿದರು.</p>.<p>ಎಂಜಿನಿಯರ್ಸ್ ಅಸೋಸಿಯೇಷನ್ ಅಧ್ಯಕ್ಷ ಎನ್.ವಿ.ರಾಮಮೂರ್ತಿ, ಉಪಾಧ್ಯಕ್ಷ ಎಚ್.ಕೆ.ನಟೇಶ್, ಕಾರ್ಯದರ್ಶಿ ಎಂ.ಡಿ.ರಾಜು, ಸಹ ಕಾರ್ಯದರ್ಶಿ ಮಂಗಳಕುಮಾರ್, ಖಜಾಂಚಿ ವೆಂಕಟೇಶ್, ನಿರ್ದೇಶಕರಾದ ಎ.ಸತೀಶ, ರವಿಕುಮಾರ್, ಶ್ರೀಕಂಠಸ್ವಾಮಿ, ಮುಖಂಡರಾದ ಎಸ್.ಪಿ.ಚಿದಾನಂದ್, ಎಂ.ಕೆ.ನಾಗರಾಜರಾವ್, ಆರ್.ಬಸಣ್ಣ, ಮುಕೇಶ್ ಪಾಟೀಲ್ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>