ಜಿಲ್ಲಾ ಉಸ್ತುವಾರಿ ಸಚಿವರಾದ ನಂತರ ನಡೆದ ಕೆಡಿಪಿ, ಜಿಲ್ಲಾ ಪಂಚಾಯಿತಿ ಸಭೆಗಳಲ್ಲಿ ಎಂದೂ ಅಧಿಕಾರಿಗಳನ್ನು ಗದರಿಸಿರಲಿಲ್ಲ. ಜೋರಾಗಿಯೂ ಮಾತನಾಡಿರಲಿಲ್ಲ. ಆದರೆ ‘ಜಿಲ್ಲೆಯ ಆಡಳಿತ ಯಂತ್ರ ಹಳಿತಪ್ಪಿದೆ, ಅಧಿಕಾರಿಗಳು ಯಾರ ಮಾತನ್ನೂ ಕೇಳುತ್ತಿಲ್ಲ, ಅಭಿವೃದ್ಧಿ ಕುಂಠಿತಗೊಂಡಿದೆ. ಜಿಲ್ಲಾ ಉಸ್ತುವಾರಿ ಸಚಿವರು ಏನು ಮಾಡುತ್ತಿದ್ದಾರೆ’ ಎಂಬ ಆರೋಪ, ಟೀಕೆಗಳು ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದ್ದವು. ಇದರಿಂದ ಸಿಟ್ಟಿಗೆದ್ದ ಸಚಿವರು ಸಭೆಯಲ್ಲೇ ಅಧಿಕಾರಿಗಳಿಗೆ ಚುರುಕು ಮುಟ್ಟಿಸಿದರು.