ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಟ್ಟುಹಬ್ಬದಂದು ಮಠಕ್ಕೆ ಭೇಟಿದ ಡಿಸಿಎಂ

Last Updated 16 ಫೆಬ್ರುವರಿ 2020, 13:13 IST
ಅಕ್ಷರ ಗಾತ್ರ

ತುಮಕೂರು: ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ತಮ್ಮ ಹುಟ್ಟುಹಬ್ಬದ ನಿಮಿತ್ತ ಭಾನುವಾರ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಶ್ರೀಗಳ ಗದ್ದುಗೆ ದರ್ಶನ ಹಾಗೂ ಸಿದ್ಧಲಿಂಗ ಸ್ವಾಮೀಜಿಯ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಿಧಾನ ಪರಿಷತ್ ಚುನಾವಣೆಯಲ್ಲಿ ವಿರೋಧ ಪಕ್ಷಗಳಿಗೆ ಸಂಖ್ಯಾಬಲದ ಕೊರತೆ ಇರುವುದರಿಂದ ವಿಧಾನ ಪರಿಷತ್ ಸದಸ್ಯನಾಗಿ ಆಯ್ಕೆಯಾಗುತ್ತೇನೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವಸತಿ ಸಚಿವ ವಿ.ಸೋಮಣ್ಣ ಮಾತನಾಡಿ, ‘ಗೋವಿಂದರಾಜ ನಗರ ಕ್ಷೇತ್ರದಲ್ಲಿ 1.75 ಲಕ್ಷ ಒಕ್ಕಲಿಗರ ಮತಗಳಿವೆ. ಅಲ್ಲಿ ಕೇವಲ 10 ಸಾವಿರ ವೀರಶೈವ ಲಿಂಗಾಯತರ ಮತಗಳಿದ್ದರೂ ನನ್ನನ್ನು ಅಲ್ಲಿನ ಜನ ಗೆಲ್ಲಿಸಿದ್ದಾರೆ. ಇಂತಹವರನ್ನು ಜಾತಿವಾದಿಗಳೆಂದು ಕರೆಯುವುದು ಸರಿಯಲ್ಲ’ ಎಂದರು.

ಸಚಿವ ಆರ್.ಅಶೋಕ್ ಮಗನ ಪ್ರಕರಣದ ಬಗ್ಗೆ ತನಿಖೆಯಾಗುತ್ತಿದ್ದು, ಮೂರ್ನಾಲ್ಕು ದಿನದಲ್ಲಿ ಸತ್ಯಾಂಶ ಗೊತ್ತಾಲಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT