ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಯಕರು ಅಭಿವೃದ್ಧಿಯತ್ತ ಗಮನ ಹರಿಸಲಿ

Last Updated 10 ಫೆಬ್ರುವರಿ 2019, 15:48 IST
ಅಕ್ಷರ ಗಾತ್ರ

ತುಮಕೂರು: ಕರ್ನಾಟಕದಲ್ಲಿ ರಾಜಕೀಯ ನಾಯಕರ ಕಿತ್ತಾಟ, ರಾಜಕೀಯ ಅರಾಜತೆಯಿಂದ ರಾಜ್ಯದ ಅಭಿವೃದ್ಧಿಯತ್ತ ಗಮನ ಸಾಧ್ಯವಾಗುತ್ತಿಲ್ಲ. ಕೂಡಲೇ ಗೊಂದಲಗಳನ್ನು ಪರಿಹರಿಸಿಕೊಂಡು ಅಭಿವೃದ್ಧಿಯತ್ತ ಗಮನ ಹರಿಸಬೇಕು ಎಂದು ಕರ್ನಾಟಕ ವೀರಶೈವ–ಲಿಂಗಾಯತ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್‌ ಒತ್ತಾಯಿಸಿದರು.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ವಿರೋಧಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಪರಸ್ಪರ ಆಡಿಯೊ, ವಿಡಿಯೊದಂತಹ ಆರೋಪಗಳನ್ನು ಮಾಡುವುದನ್ನು ಬಿಟ್ಟು, ಬರದಿಂದ ತತ್ತರಿಸುತ್ತಿರುವ ರಾಜ್ಯದ ಜನರಿಗೆ ಉತ್ತಮ ಆಡಳಿತ ನೀಡಬೇಕು’ ಎಂದರು.

ವೇದಿಕೆ ರಾಜ್ಯ ಸಂಚಾಲಕವಿಜಯಕುಮಾರ್, ಉಪಾಧ್ಯಕ್ಷ ಟಿ.ಆರ್.ಸದಾಶಿವಯ್ಯ, ಜಿಲ್ಲಾ ಘಟಕದ ಅಧ್ಯಕ್ಷ ಪರಮೇಶ್ವರ್‌, ಸಂಚಾಲಕ ಅಭಿಲಾಷ್ ಗೋಷ್ಠಿಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT