<p><strong>ಚಿಕ್ಕನಾಯಕನಹಳ್ಳಿ</strong>: ಚಿರತೆ ದಾಳಿಯಿಂದಾಗಿ ಮದನಮಡು ಗ್ರಾಮದ ಮೂಡ್ಲಯ್ಯ ಎಂಬುವವರು ತೀವ್ರ ಗಾಯಗೊಂಡಿದ್ದಾರೆ.</p>.<p>ಅವರು ಮದನಮಡು ಗ್ರಾಮದ ಸೀಡ್ಯಕೆರೆ ಬಳಿ ಕುರಿ ಮೇಯಿಸುತ್ತಿದ್ದಾಗೆ ಚಿರತೆ ದಾಳಿ ಮಾಡಿದೆ. ತಲೆ, ಕಿವಿಗಳಿಗೆ ಗಾಯಗಳಾಗಿವೆ. ಮೂಡ್ಲಯ್ಯ ಅವರ ಕಿರುಚಾಟಕ್ಕೆ ಅಕ್ಕಪಕ್ಕದ ತೋಟದವರು ಬರುವುದನ್ನು ಕಂಡ ಚಿರತೆ ಓಡಿ ಹೋಗಿದೆ. ತೀವ್ರವಾಗಿ ಗಾಯಗೊಂಡ ಅವರನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.</p>.<p>ಕಂದಿಕೆರೆ ಭಾಗದ ಹಲವು ಗ್ರಾಮಗಳಲ್ಲಿ ಚಿರತೆ ಹಾವಳಿ ಹೆಚ್ಚಾಗಿದೆ ಎಂದು ಹಲವು ಬಾರಿ ಅರಣ್ಯ ಇಲಾಖೆಗೆ ದೂರು ನೀಡಲಾಗಿದೆ. ಆದರೂ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಂಡಿಲ್ಲ, ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಬೋನ್ ಇಟ್ಟು ಚಿರತೆ ಸೆರೆಹಿಡಿಯಬೇಕು ಎಂದು ಆಸ್ಪತ್ರೆಗೆ ಭೇಟಿ ನೀಡಿದ ಡಿಎಸ್ಎಸ್ ಮುಖಂಡ ಬೇವಿನಹಳ್ಳಿ ಚನ್ನಬಸವಯ್ಯ ಆಗ್ರಹಿಸಿದ್ದಾರೆ.</p>.<p>ಡಿಎಸ್ಎಸ್ ಮುಖಂಡರಾದ ಗೋ.ನಿ.ವಸಂತ್ ಕುಮಾರ್, ಜೆ.ಸಿ.ಪುರ ಗೋವಿಂದರಾಜು, ಎಸ್.ಎಸಿ.ಎಸ್.ಟಿ ನೌಕರರ ಸಮನ್ವಯ ಸಮಿತಿಯ ಮಂಜುನಾಥ್, ಚಂದ್ರಶೇಖರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕನಾಯಕನಹಳ್ಳಿ</strong>: ಚಿರತೆ ದಾಳಿಯಿಂದಾಗಿ ಮದನಮಡು ಗ್ರಾಮದ ಮೂಡ್ಲಯ್ಯ ಎಂಬುವವರು ತೀವ್ರ ಗಾಯಗೊಂಡಿದ್ದಾರೆ.</p>.<p>ಅವರು ಮದನಮಡು ಗ್ರಾಮದ ಸೀಡ್ಯಕೆರೆ ಬಳಿ ಕುರಿ ಮೇಯಿಸುತ್ತಿದ್ದಾಗೆ ಚಿರತೆ ದಾಳಿ ಮಾಡಿದೆ. ತಲೆ, ಕಿವಿಗಳಿಗೆ ಗಾಯಗಳಾಗಿವೆ. ಮೂಡ್ಲಯ್ಯ ಅವರ ಕಿರುಚಾಟಕ್ಕೆ ಅಕ್ಕಪಕ್ಕದ ತೋಟದವರು ಬರುವುದನ್ನು ಕಂಡ ಚಿರತೆ ಓಡಿ ಹೋಗಿದೆ. ತೀವ್ರವಾಗಿ ಗಾಯಗೊಂಡ ಅವರನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.</p>.<p>ಕಂದಿಕೆರೆ ಭಾಗದ ಹಲವು ಗ್ರಾಮಗಳಲ್ಲಿ ಚಿರತೆ ಹಾವಳಿ ಹೆಚ್ಚಾಗಿದೆ ಎಂದು ಹಲವು ಬಾರಿ ಅರಣ್ಯ ಇಲಾಖೆಗೆ ದೂರು ನೀಡಲಾಗಿದೆ. ಆದರೂ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಂಡಿಲ್ಲ, ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಬೋನ್ ಇಟ್ಟು ಚಿರತೆ ಸೆರೆಹಿಡಿಯಬೇಕು ಎಂದು ಆಸ್ಪತ್ರೆಗೆ ಭೇಟಿ ನೀಡಿದ ಡಿಎಸ್ಎಸ್ ಮುಖಂಡ ಬೇವಿನಹಳ್ಳಿ ಚನ್ನಬಸವಯ್ಯ ಆಗ್ರಹಿಸಿದ್ದಾರೆ.</p>.<p>ಡಿಎಸ್ಎಸ್ ಮುಖಂಡರಾದ ಗೋ.ನಿ.ವಸಂತ್ ಕುಮಾರ್, ಜೆ.ಸಿ.ಪುರ ಗೋವಿಂದರಾಜು, ಎಸ್.ಎಸಿ.ಎಸ್.ಟಿ ನೌಕರರ ಸಮನ್ವಯ ಸಮಿತಿಯ ಮಂಜುನಾಥ್, ಚಂದ್ರಶೇಖರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>