ಇತ್ತೀಚಿಗೆ ಗ್ರಾಮದ ಸುತ್ತಮುತ್ತಲ ಪ್ರದೇಶದಲ್ಲಿ ಚಿರತೆ ಹಾವಳಿ ಹೆಚ್ಚಿದೆ. ವಾರದ ಹಿಂದೆ ಜಯಣ್ಣ ಅವರಿಗೆ ಸೇರಿದ ಕುರಿಗಳನ್ನು ಚಿರತೆ ಕೊಂದಿತ್ತು. ರಾತ್ರಿ ವೇಳೆ ಗ್ರಾಮದ ಬಳಿಯೇ ಚಿರತೆ ಓಡಾಡುತ್ತಿದೆ. ಸಾರ್ವಜನಿಕರು ಮನೆಯಿಂದ ಹೊರಬರಲು ಭಯಪಡುವ ಸ್ಥಿತಿ ಇದೆ. ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಹಾವಳಿ ನಿಯಂತ್ರಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.