ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿರತೆ ದಾಳಿ: ಕರು ಸಾವು

Published 18 ಜನವರಿ 2024, 8:10 IST
Last Updated 18 ಜನವರಿ 2024, 8:10 IST
ಅಕ್ಷರ ಗಾತ್ರ

ಪಾವಗಡ: ತಾಲ್ಲೂಕಿನ ಮಂಗಳವಾಡ ಗ್ರಾಮದ ಬಳಿ ಮಂಗಳವಾರ ರಾತ್ರಿ ಕರು ಮೇಲೆ ಚಿರತೆ ದಾಳಿ ನಡೆಸಿ ಕೊಂದಿದೆ.

ಗ್ರಾಮದ ದೊಡ್ಡಣ್ಣ ಗ್ರಾಮದ ಬಳಿ ಜಮೀನಿನ ಕೊಟ್ಟಿಗೆಯಲ್ಲಿ ಕೂಡಿ ಹಾಕಿದ್ದ ಎಂಟು ತಿಂಗಳ ಗಂಡು ಕರುವನ್ನು ಚಿರತೆ ಹೊತ್ತೊಯ್ದು ತಿಂದಿದೆ.

ಇತ್ತೀಚಿಗೆ ಗ್ರಾಮದ ಸುತ್ತಮುತ್ತಲ ಪ್ರದೇಶದಲ್ಲಿ ಚಿರತೆ ಹಾವಳಿ ಹೆಚ್ಚಿದೆ. ವಾರದ ಹಿಂದೆ ಜಯಣ್ಣ ಅವರಿಗೆ ಸೇರಿದ ಕುರಿಗಳನ್ನು ಚಿರತೆ ಕೊಂದಿತ್ತು. ರಾತ್ರಿ ವೇಳೆ ಗ್ರಾಮದ ಬಳಿಯೇ ಚಿರತೆ ಓಡಾಡುತ್ತಿದೆ. ಸಾರ್ವಜನಿಕರು ಮನೆಯಿಂದ ಹೊರಬರಲು ಭಯಪಡುವ ಸ್ಥಿತಿ ಇದೆ. ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಹಾವಳಿ ನಿಯಂತ್ರಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT