ಪದೇ ಪದೇ ದಾಳಿ: ಹೆಬ್ಬೂರು ಭಾಗದಲ್ಲಿ ಚಿರತೆ ಪದೇ ಪದೇ ಜನರನ್ನಲ್ಲದೇ ದನ, ಕುರಿಗಳ ಮೇಲೆ ದಾಳಿ ಮಾಡುತ್ತಿದೆ. ಇದರಿಂದ ಈ ಭಾಗದ ಜನರು ಆತಂಕಕ್ಕೀಡಾಗಿದ್ದಾರೆ. ಕೆಲವರು ತಾಳ್ಮೆ ಕಳೆದುಕೊಂಡು ಈ ಹಿಂದೆ ರಸ್ತೆತಡೆ ನಡೆಸಿ ಪ್ರತಿಭಟನೆ ನಡೆಸಿದ್ದರು. ಇದೀಗ ಪುನಃ ಪ್ರತಿಭಟನೆ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಪೊಲೀಸರು ಮುಂಜಾಗೃತಾ ಕ್ರಮವಹಿಸಿದ್ದಾರೆ.