ಗುಬ್ಬಿ: ತಾಲ್ಲೂಕಿನ ಮಡೇನಹಳ್ಳಿ ಗ್ರಾಮದಲ್ಲಿ ಸೋಮವಾರ ರಾತ್ರಿ ಚಿರತೆಯೊಂದು ಕುರಿ ರೊಪ್ಪಕ್ಕೆ ನುಗ್ಗಿ, ಒಂದು ಕುರಿಯನ್ನು ಕೊಂದು ಹಾಕಿ, ಮತ್ತೊಂದು ಕುರಿಯನ್ನು ಹೊತ್ತೊಯ್ದಿದೆ.
ರೈತ ಕರೆರಂಗಯ್ಯ ಅವರ ರೊಪ್ಪಕ್ಕೆ ನುಗ್ಗಿದ ಚಿರತೆಯು ಹತ್ತು ಕುರಿಗಳ ಪೈಕಿ ಎರಡು ಕುರಿಗಳನ್ನು ಸಾಯಿಸಿದೆ. ಕರೆರಂಗಯ್ಯ ಕುರಿ ಸಾಕಾಣಿಕೆಯಿಂದಲೇ ಬದುಕು ಕಟ್ಟಿಕೊಂಡಿದ್ದರು.
ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನೆಡಸಿದರು. ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಭಾಗದಲ್ಲಿ ಚಿರತೆ ದಾಳಿಯು ಹೆಚ್ಚಾಗುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಚಿರತೆ ಸೆರೆ ಹಿಡಿಯಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ರೈತರು ಒತ್ತಾಯಿಸಿದ್ದಾರೆ.