ತುಮಕೂರು: ಕೊರಟಗೆರೆ ತಾಲ್ಲೂಕಿನ ಕೋಳಾಲ ಹೋಬಳಿ, ವಜ್ಜನಕುರಿಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೋರಗಾನಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿಯಿಂದ ಕರು ಸಾವನ್ನಪ್ಪಿದೆ.
ಮೋರಗಾನಹಳ್ಳಿ ಗ್ರಾಮದ ವಿಶ್ವಣ್ಣ ಎಂಬುವರಿಗೆ ಸೇರಿದ ಕರು. ಮನೆಯ ಪಕ್ಕದ ಕೊಟ್ಟಿಗೆಯಲ್ಲಿ ಕರುವನ್ನು ಕಟ್ಟಲಾಗಿತ್ತು. ಗುರುವಾರ ತಡರಾತ್ರಿ ದಾಳಿ ನಡೆಸಿರುವ ಚಿರತೆ ಕಟ್ಟಿರುವ ಕರುವನ್ನು ಎತ್ತೊಯ್ಯಲಾಗದೆ ಇದ್ದ ಜಾಗದಲ್ಲೆ ತಿಂದು ಹಾಕಿದೆ.
ಗ್ರಾಮದ ಮಧ್ಯ ಭಾಗದಲ್ಲಿನ ಕೊಟ್ಟಿಗೆಗೆ ಚಿರತೆ ದಾಳಿ ಮಾಡಿರುವುದರಿಂದ ಗ್ರಾಮದ ಜನ ಭಯಭೀತರಾಗಿದ್ದಾರೆ.ಕೂಡಲೇ ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಅಧಿಕಾರಿಗಳನ್ನು ಗ್ರಾಮಸ್ಥರು ಒತ್ತಾಯಿಸಿದ್ದಾರೆ.