ತುಮಕೂರು: ತಾಲ್ಲೂಕಿನ ಹೊಳಕಲ್ಲು ಗ್ರಾಮದ ಬಳಿ ಮಂಗಳವಾರ ಸಂಜೆ 6.30ರ ಸುಮಾರಿನಲ್ಲಿ ಚಿರತೆ ದಾಳಿ ನಡೆಸಿದ್ದು ರಂಗಸ್ವಾಮಯ್ಯ (65) ಎಂಬುವವರು ಗಾಯಗೊಂಡಿದ್ದಾರೆ. ಬೇಲಿಯ ಬಳಿ ಕೆಲಸ ಮಾಡುತ್ತಿದ್ದಾಗ ಅವರ ಮೇಲೆ ಚಿರತೆ ದಾಳಿ ನಡೆಸಿದೆ. ಅವರ ಭುಜದ ಭಾಗಕ್ಕೆ ಗಾಯಗಳಾಗಿದ್ದು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾತ್ರಿ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ತೆರಳಿದರು.