ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು | ಚಿರತೆ ದಾಳಿ: 10 ಕುರಿ ಸಾವು

Last Updated 17 ಜೂನ್ 2022, 8:32 IST
ಅಕ್ಷರ ಗಾತ್ರ

ತುಮಕೂರು: ತಾಲ್ಲೂಕಿನ ಗಿಡಗನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಮುಂಜಾನೆ ಚಿರತೆ ದಾಳಿ ಮಾಡಿ, ಹತ್ತು ಕುರಿಗಳನ್ನು ಕೊಂದು ಹಾಕಿದೆ.

ಗ್ರಾಮದ ದಂಡಾಂಜುನಯ್ಯ ಅವರಿಗೆ ಸೇರಿದ ಕೊಟ್ಟಿಗೆಗೆ ನುಗ್ಗಿದ ಚಿರತೆ, ಹತ್ತು ಕುರಿಗಳನ್ನು ಕೊಂದಿದ್ದು, ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ. ಚಿರತೆ ದಾಳಿಯಿಂದ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ನಷ್ಟ ಸಂಭವಿಸಿದ್ದು, ಕುರಿಗಾಹಿ ಕಂಗಾಲಾಗಿದ್ದಾರೆ.

ಗಿಡಗನಹಳ್ಳಿಯಲ್ಲಿ ಪದೇ ಪದೇ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT