ಚಿರತೆಗೆ ಅರವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿಯಲಾಗಿದೆ. ಹೆಬ್ಬೂರು ಠಾಣೆ ಎಸ್ಐ ಸುಂದರ್ ಮತ್ತು ಸಿಬ್ಬಂದಿ, ಅರಣ್ಯ ಇಲಾಖೆ ಸಿಬ್ಬಂದಿಗಳಾದ ಪ್ರಕಾಶ್, ನಟರಾಜು, ಮಂಜುನಾಥ್, ರವಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಈ ಭಾಗದಲ್ಲಿ ಚಿರತೆ ಚಲನವಲನಗಳು ಹೆಚ್ಚಿದೆ. ಹೆಬ್ಬೂರು ಹಾಗೂ ಗೂಳೂರು ಹೋಬಳಿ ವ್ಯಾಪ್ತಿಯಲ್ಲಿಯೇ 9 ಚಿರತೆಗಳನ್ನು ಸೆರೆ ಹಿಡಿಯಲಾಗಿದೆ.