<p><strong>ಗುಬ್ಬಿ: </strong>ತೋಟಕ್ಕೆ ತೆರಳಿದ್ದ ರೈತನ ಕಿವಿ ಕಚ್ಚಿ ತುಂಡರಿಸಿ, ಗಾಯಗೊಳಿಸಿ ಪೊದೆ ಸೇರಿದ್ದ ಕರಡಿಯನ್ನು ಅರಣ್ಯ ಇಲಾಖೆ ಸೆರೆ ಹಿಡಿದಿದೆ.</p>.<p>ತಾಲ್ಲೂಕಿನ ನಿಟ್ಟೂರು ಹೋಬಳಿ ಮುದ್ದುಪುರ ಗ್ರಾಮದಲ್ಲಿ ಸತತ ನಾಲ್ಕು ಗಂಟೆಗಳ ಕಾರ್ಯಾಚರಣೆ ನಂತರಅರಿವಳಿಕೆ ನೀಡಿ ಸೆರೆ ಹಿಡಿಯಲಾಗಿದೆ.</p>.<p>ರೈತ ಮಹದೇವಯ್ಯ (53) ಮುಂಜಾನೆ ತಮ್ಮ ತೋಟಕ್ಕೆ ತೆರಳಿದ್ದ ಸಂದರ್ಭದಲ್ಲಿ ಪೊದೆಯಲ್ಲಿ ಅಡಗಿದ್ದ ಕರಡಿ ದಿಢೀರ್ ದಾಳಿ ನಡೆಸಿ ಕಿವಿಯನ್ನು ಕಚ್ಚಿ ತುಂಡರಿಸಿ ಮೈಮೇಲೆರಗಿ ಪರಚಿ ಗಾಯಗೊಳಿಸಿತ್ತು. ಕಿರುಚಾಟ ಕೇಳಿ ಸ್ಥಳಕ್ಕೆ ಬಂದ ಜನರನ್ನು ಕಂಡು ಪೊದೆ ಸೇರಿತ್ತು.</p>.<p>ವಿಷಯ ತಿಳಿದು ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಪೊದೆಯಲ್ಲಿ ಅವಿತ ಕರಡಿ ಹಿಡಿಯಲು ಹಾಸನದ ಅರವಳಿಕೆ ತಜ್ಞ ಡಾ.ಮರುಳೀಧರ್ ನೇತೃತ್ವದ ತಂಡ ಕರೆಸಿದರು. ನಂತರ ಸೆರೆ ಹಿಡಿಯಲಾಯಿತು.</p>.<p>5 ವರ್ಷದ ಗಂಡು ಕರಡಿಯನ್ನು ಬನ್ನೇರುಘಟ್ಟ ಅರಣ್ಯ ಪ್ರದೇಶಕ್ಕೆ ಬಿಡಲಾಯಿತು ಎಂದು ವಲಯ ಅರಣ್ಯಾಧಿಕಾರಿ ರವಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಬ್ಬಿ: </strong>ತೋಟಕ್ಕೆ ತೆರಳಿದ್ದ ರೈತನ ಕಿವಿ ಕಚ್ಚಿ ತುಂಡರಿಸಿ, ಗಾಯಗೊಳಿಸಿ ಪೊದೆ ಸೇರಿದ್ದ ಕರಡಿಯನ್ನು ಅರಣ್ಯ ಇಲಾಖೆ ಸೆರೆ ಹಿಡಿದಿದೆ.</p>.<p>ತಾಲ್ಲೂಕಿನ ನಿಟ್ಟೂರು ಹೋಬಳಿ ಮುದ್ದುಪುರ ಗ್ರಾಮದಲ್ಲಿ ಸತತ ನಾಲ್ಕು ಗಂಟೆಗಳ ಕಾರ್ಯಾಚರಣೆ ನಂತರಅರಿವಳಿಕೆ ನೀಡಿ ಸೆರೆ ಹಿಡಿಯಲಾಗಿದೆ.</p>.<p>ರೈತ ಮಹದೇವಯ್ಯ (53) ಮುಂಜಾನೆ ತಮ್ಮ ತೋಟಕ್ಕೆ ತೆರಳಿದ್ದ ಸಂದರ್ಭದಲ್ಲಿ ಪೊದೆಯಲ್ಲಿ ಅಡಗಿದ್ದ ಕರಡಿ ದಿಢೀರ್ ದಾಳಿ ನಡೆಸಿ ಕಿವಿಯನ್ನು ಕಚ್ಚಿ ತುಂಡರಿಸಿ ಮೈಮೇಲೆರಗಿ ಪರಚಿ ಗಾಯಗೊಳಿಸಿತ್ತು. ಕಿರುಚಾಟ ಕೇಳಿ ಸ್ಥಳಕ್ಕೆ ಬಂದ ಜನರನ್ನು ಕಂಡು ಪೊದೆ ಸೇರಿತ್ತು.</p>.<p>ವಿಷಯ ತಿಳಿದು ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಪೊದೆಯಲ್ಲಿ ಅವಿತ ಕರಡಿ ಹಿಡಿಯಲು ಹಾಸನದ ಅರವಳಿಕೆ ತಜ್ಞ ಡಾ.ಮರುಳೀಧರ್ ನೇತೃತ್ವದ ತಂಡ ಕರೆಸಿದರು. ನಂತರ ಸೆರೆ ಹಿಡಿಯಲಾಯಿತು.</p>.<p>5 ವರ್ಷದ ಗಂಡು ಕರಡಿಯನ್ನು ಬನ್ನೇರುಘಟ್ಟ ಅರಣ್ಯ ಪ್ರದೇಶಕ್ಕೆ ಬಿಡಲಾಯಿತು ಎಂದು ವಲಯ ಅರಣ್ಯಾಧಿಕಾರಿ ರವಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>