ಇದೀಗ ಸೆರೆಯಾಗಿರುವ ಚಿರತೆ ಜನರ ಮೇಲೆ ದಾಳಿ ಮಾಡಿದ ನರಭಕ್ಷಕ ಚಿರತೆ ಹೌದೋ, ಅಲ್ಲವೋ ಎನ್ನುವ ಚರ್ಚೆ ಆರಂಭವಾಗಿದೆ. ಆದರೆ, ಇತ್ತೀಚೆಗೆ ತುಮಕೂರು ತಾಲ್ಲೂಕು ಹೆಬ್ಬೂರು ಹೋಬಳಿ ಬೈಚೇನಹಳ್ಳಿಯಲ್ಲಿ ಮಗುವನ್ನು ಕೊಂದ ಸ್ಥಳದಿಂದ ಕೇವಲ 10 ಕಿ.ಮೀ ವ್ಯಾಪ್ತಿಯಲ್ಲಿ ಈ ಚಿರತೆ ಸೆರೆ ಸಿಕ್ಕಿದೆ. ಅಲ್ಲದೆ, ಇದು ಹೆಣ್ಣು ಚಿರತೆ ಆಗಿರುವುದರಿಂದ ನರಭಕ್ಷಕ ಚಿರತೆಯೇ ಆಗಿರುವ ಸಾಧ್ಯತೆ ಇದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಗಿರೀಶ್ ‘ಪ್ರಜಾವಾಣಿ’ ತಿಳಿಸಿದ್ದಾರೆ.