ಇತ್ತೀಚೆಗೆ ಈ ಭಾಗದಲ್ಲಿ ಚಿರತೆಯು ನಾಯಿ, ಕುರಿ, ಮೇಕೆಗಳ ಮೇಲೆ ದಾಳಿ ನಡೆಸಿ ಜನರಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿತ್ತು. ಸಾರ್ವಜನಿಕರ ಒತ್ತಾಯದ ಮೇರೆಗೆ ಅರಣ್ಯ ಇಲಾಖೆ ಆಯಕಟ್ಟಿನ ಜಾಗದಲ್ಲಿ ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿರುವುದರಿಂದ ಸುತ್ತಮುತ್ತಲಿನ ಜನರು ಸ್ವಲ್ಪಮಟ್ಟಿಗೆ ನಿರಾಳವಾಗಿದ್ದರೂ, ಇನ್ನೂ ಸಾಕಷ್ಟು ಚಿರತೆಗಳು ಇವೆ ಎಂಬ ಆತಂಕದಲ್ಲಿ ನಾಗರಿಕರು ಇದ್ದಾರೆ.