ಗುಬ್ಬಿ:ನಿಟ್ಟೂರು ಹೋಬಳಿ ಅಂತಪುರ ಸುತ್ತಮುತ್ತ ಭೀತಿ ಹುಟ್ಟಿಸಿದ್ದ ಚಿರತೆ ಸೆರೆ

ಗುಬ್ಬಿ: ತಾಲ್ಲೂಕಿನ ನಿಟ್ಟೂರು ಹೋಬಳಿ ಅಂತಪುರ ಸುತ್ತಮುತ್ತ ಕೆಲವು ದಿನಗಳಿಂದ ಭೀತಿಯನ್ನು ಹುಟ್ಟಿಸಿದ್ದ ಹೆಣ್ಣು ಚಿರತೆಯು ಬುಧವಾರ ರಾತ್ರಿ ಕಾರೇಹಳ್ಳಿ ಗೇಟ್ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಸೆರೆ ಸಿಕ್ಕಿದೆ. ಇದರಿಂದಾಗಿ ಸುತ್ತಮುತ್ತಲ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ಗುಬ್ಬಿ ವಲಯ ಅರಣ್ಯಾಧಿಕಾರಿ ದುಗ್ಗಪ್ಪ ನೇತೃತ್ವದ ತಂಡ ಸ್ಥಳಕ್ಕೆ ಭೇಟಿ ನೀಡಿ ಚಿರತೆಯನ್ನು ಅರಣ್ಯ ಪ್ರದೇಶಕ್ಕೆ ಸಾಗಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.