<p><strong>ತುರುವೇಕೆರೆ:</strong> ತಾಲ್ಲೂಕಿನ ಅರೇಮಲ್ಲೇನಹಳ್ಳಿ ಹೊರವಲಯದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆ ಹಿಡಿದಿದ್ದಾರೆ.</p>.<p>ಡಿ.21ರಂದು ಸುಜಾತಾ ಎಂಬ ಮಹಿಳೆಯನ್ನು ಚಿರತೆ ದಾಳಿ ಮಾಡಿ ಕೊಂದಿತ್ತು. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರ ಆಕ್ರೋಶದ ಮೇರೆಗೆ ಅರಣ್ಯ ಇಲಾಖೆ ಗ್ರಾಮದಲ್ಲಿ ನಾಲ್ಕು ಬೋನುಗಳನ್ನು ಇಟ್ಟಿತ್ತು. ಡಿ.22ರಂದು 8 ವರ್ಷದ ಗಂಡು ಚಿರತೆ ಸೆರೆ ಸಿಕ್ಕಿತ್ತು. ಡಿ 23ರಂದು 5 ವರ್ಷದ ಹೆಣ್ಣು ಚಿರತೆ ಸೆರೆಯಾಗಿದೆ. </p>.<p>ಅರೇಮಲ್ಲೇನಹಳ್ಳಿ ಗ್ರಾಮದಲ್ಲಿ ಹತ್ತಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿ ಇದ್ದಾರೆ. ಡ್ರೋನ್ ಕ್ಯಾಮೆರಾ, ಸಿಸಿ ಟಿವಿ ಕ್ಯಾಮರಾ ಸೇರಿದಂತೆ ವಿವಿಧ ತಂತ್ರಜ್ಞಾನ ಬಳಸಿ ಚಿರತೆಯನ್ನು ಹಿಡಿಯುವಲ್ಲಿ ಅರಣ್ಯ ಇಲಾಖೆ ಕಾರ್ಯಮಗ್ನವಾಗಿದೆ ಎಂದು ಚಿಕ್ಕನಾಯಕನಹಳ್ಳಿ ವಲಯ ಅರಣ್ಯಾಧಿಕಾರಿ ಅಮಿತ್ ತಿಳಿಸಿದ್ದಾರೆ.</p>.<p>ಚಿರತೆಯ ಚಲನವಲನವನ್ನು ಗಂಭೀರವಾಗಿ ಗಮನಿಸಲಾಗುತ್ತಿದೆ. ಸದ್ಯಕ್ಕೆ ಯಾವುದೇ ಕುರುಹು ಸಿಕ್ಕಂತೆ ಇಲ್ಲ. ಆದರೂ ಸಹ ಈಗ ಎರಡು ಬೋನುಗಳನ್ನು ಇಡಲಾಗಿದೆ. ಇಂದು ಮತ್ತೆ ನಾಳೆಯೊಳಗೆ ಮತ್ತೆ ಎರಡು ಬೋನುಗಳನ್ನು ಇಟ್ಟು ಚಿರತೆಯನ್ನು ಸೆರೆ ಹಿಡಿಯಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದ್ದಾರೆ.</p>.<p>ಮಹಿಳೆಯನ್ನು ಕೊಂದ ಚಿರತೆ ಯಾವುದು ಎಂಬುದು ವೈದ್ಯಕೀಯ ಪರೀಕ್ಷೆ ಮಾಡಿದ ನಂತರವೇ ತಿಳಿಯಲಿದೆ. ಈಗ ಸಿಕ್ಕಿರುವ ಚಿರತೆಗಳೊ ಅಥವಾ ಬೇರೆಯೊ ಎಂಬುದನ್ನು ಮಹಿಳೆಯ ರಕ್ತ ಮತ್ತು ಈ ಎರಡೂ ಚಿರತೆಗಳ ರಕ್ತವನ್ನು ಪರೀಕ್ಷಿದ ನಂತರವೇ ತಿಳಿಯಲಿದೆ ಎಂದು ಅಮಿತ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುರುವೇಕೆರೆ:</strong> ತಾಲ್ಲೂಕಿನ ಅರೇಮಲ್ಲೇನಹಳ್ಳಿ ಹೊರವಲಯದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆ ಹಿಡಿದಿದ್ದಾರೆ.</p>.<p>ಡಿ.21ರಂದು ಸುಜಾತಾ ಎಂಬ ಮಹಿಳೆಯನ್ನು ಚಿರತೆ ದಾಳಿ ಮಾಡಿ ಕೊಂದಿತ್ತು. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರ ಆಕ್ರೋಶದ ಮೇರೆಗೆ ಅರಣ್ಯ ಇಲಾಖೆ ಗ್ರಾಮದಲ್ಲಿ ನಾಲ್ಕು ಬೋನುಗಳನ್ನು ಇಟ್ಟಿತ್ತು. ಡಿ.22ರಂದು 8 ವರ್ಷದ ಗಂಡು ಚಿರತೆ ಸೆರೆ ಸಿಕ್ಕಿತ್ತು. ಡಿ 23ರಂದು 5 ವರ್ಷದ ಹೆಣ್ಣು ಚಿರತೆ ಸೆರೆಯಾಗಿದೆ. </p>.<p>ಅರೇಮಲ್ಲೇನಹಳ್ಳಿ ಗ್ರಾಮದಲ್ಲಿ ಹತ್ತಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿ ಇದ್ದಾರೆ. ಡ್ರೋನ್ ಕ್ಯಾಮೆರಾ, ಸಿಸಿ ಟಿವಿ ಕ್ಯಾಮರಾ ಸೇರಿದಂತೆ ವಿವಿಧ ತಂತ್ರಜ್ಞಾನ ಬಳಸಿ ಚಿರತೆಯನ್ನು ಹಿಡಿಯುವಲ್ಲಿ ಅರಣ್ಯ ಇಲಾಖೆ ಕಾರ್ಯಮಗ್ನವಾಗಿದೆ ಎಂದು ಚಿಕ್ಕನಾಯಕನಹಳ್ಳಿ ವಲಯ ಅರಣ್ಯಾಧಿಕಾರಿ ಅಮಿತ್ ತಿಳಿಸಿದ್ದಾರೆ.</p>.<p>ಚಿರತೆಯ ಚಲನವಲನವನ್ನು ಗಂಭೀರವಾಗಿ ಗಮನಿಸಲಾಗುತ್ತಿದೆ. ಸದ್ಯಕ್ಕೆ ಯಾವುದೇ ಕುರುಹು ಸಿಕ್ಕಂತೆ ಇಲ್ಲ. ಆದರೂ ಸಹ ಈಗ ಎರಡು ಬೋನುಗಳನ್ನು ಇಡಲಾಗಿದೆ. ಇಂದು ಮತ್ತೆ ನಾಳೆಯೊಳಗೆ ಮತ್ತೆ ಎರಡು ಬೋನುಗಳನ್ನು ಇಟ್ಟು ಚಿರತೆಯನ್ನು ಸೆರೆ ಹಿಡಿಯಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದ್ದಾರೆ.</p>.<p>ಮಹಿಳೆಯನ್ನು ಕೊಂದ ಚಿರತೆ ಯಾವುದು ಎಂಬುದು ವೈದ್ಯಕೀಯ ಪರೀಕ್ಷೆ ಮಾಡಿದ ನಂತರವೇ ತಿಳಿಯಲಿದೆ. ಈಗ ಸಿಕ್ಕಿರುವ ಚಿರತೆಗಳೊ ಅಥವಾ ಬೇರೆಯೊ ಎಂಬುದನ್ನು ಮಹಿಳೆಯ ರಕ್ತ ಮತ್ತು ಈ ಎರಡೂ ಚಿರತೆಗಳ ರಕ್ತವನ್ನು ಪರೀಕ್ಷಿದ ನಂತರವೇ ತಿಳಿಯಲಿದೆ ಎಂದು ಅಮಿತ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>