ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ನಾಗೇಶ್ ಮಾತನಾಡಿ, ರಾಜ್ಯದ ತೆಂಗಿನ ಉತ್ಪನ್ನಗಳನ್ನು ಖರೀದಿಸಿ ಪಕ್ಕದ ತಮಿಳುನಾಡು ಕೈಗಾರಿಕೆಗಳನ್ನು ನಡೆಸುತ್ತಿದೆ. ಆದರೆ ತಮಿಳುನಾಡಿನಿಂದ ಕರ್ನಾಟಕಕ್ಕೆ ಒಂದೇ ಒಂದು ಕಾಯಿ ಸಿಪ್ಪೆಯನ್ನು ತರಲು ಸಾದ್ಯವಾಗದು. ಅಲ್ಲಿನವರು ತೆಂಗಿನ ಉತ್ಪನ್ನಗಳನ್ನು ತಯಾರು ಮಾಡಿ, ಮಾರುಕಟ್ಟೆ ಮಾಡುವ ಕೌಶಲ್ಯ ಹೊಂದಿದ್ದಾರೆ. ಕರ್ನಾಟಕದ ತೆಂಗಿನ ಉತ್ಪನ್ನಗಳಿಗೆ ದೂರದ ಗುಜರಾತ್ ಸೇರಿದಂತೆ ಅನೇಕ ಕಡೆ ಬೇಡಿಕೆಯಿದೆ. ಸ್ಥಳೀಯವಾಗಿ ತೆಂಗು ಬೆಳೆಗಾರರು ಉತ್ಪನ್ನಗಳ ತಯಾರಿಕೆಗೆ ಮುಂದಾಗಬೇಕು ಎಂದು ಹೇಳಿದರು.