ಶಿರಾ: ಆರ್ಥಿಕ ಪುನಶ್ಚೇತನಕ್ಕೆ ಕಾರ್ಮಿಕರಿಗೆ ಪರ್ಯಾಯ ನೀತಿಗಳನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಸಿಐಟಿಯು ಕಾರ್ಯಕರ್ತರು ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.
ಲಾಕ್ಡೌನ್ನಿಂದಾಗಿ ಸಂಘಟಿತ ಕಾರ್ಮಿಕರಿಗೆ ಪೂರ್ಣ ವೇತನ ಸಿಕ್ಕಿಲ್ಲ. ಅಸಂಘಟಿತ ಕಾರ್ಮಿಕರಿಗೆ ಸರ್ಕಾರ ಘೋಷಿಸಿದ ಪರಿಹಾರ ದೊರೆಯದೆ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಶೇ 70ರಷ್ಟು ಕಾರ್ಮಿಕರು ಉದ್ಯೋಗ ಕಳೆದುಕೊಂಡು ಜೀವನ ಸಾಗಿಸಲು ಕಷ್ಟಪಡುತ್ತಿದ್ದಾರೆ ಎಂದರು.
ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯಿಂದಾಗಿ ರೈತರು, ಕಾರ್ಮಿಕರು, ಬಡವರ ಬದುಕು ಬೀದಿಗೆ ಬರುತ್ತದೆ. ಕಾರ್ಮಿಕ ಮತ್ತು ರೈತ ವಿರೋಧಿ ಕಾಯ್ದೆಗಳನ್ನು ಸರ್ಕಾರ ಜಾರಿಗೊಳಿಸಬಾರದು. ಲಾಕ್ಡೌನ್ ಸಮಯದಲ್ಲಿ ಸಂತಸ್ತ್ರರಾದವರಿಗೆ ಪರಿಹಾರ ನೀಡುವುದು ಹಾಗೂ ಕಾರ್ಮಿಕರ ಬೇಡಿಕೆ ಈಡೇರಿಸುವುದು ಸರ್ಕಾರದ ಆದ್ಯತೆಯಾಗಬೇಕು ಎಂದರು.
ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ, ತಾಲ್ಲೂಕು ಕಾರ್ಯದರ್ಶಿ ನಿಸಾರ್ ಅಹಮದ್, ರವೀಶ್, ಕಂಬಣ್ಣ, ರಂಗನಾಥ್, ಕೃಷ್ಣ ಪ್ಪ, ಖಲೀಲ್, ಆನಂದ್ ಇದ್ದರು.