ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುರುವೇಕೆರೆ: ಸಿಪಿವೈ ರಾಜೀನಾಮೆ ನೀಡಲಿ ಎಂದ ಶಾಸಕ ಮಸಾಲ ಜಯರಾಂ

Last Updated 8 ಜೂನ್ 2021, 4:19 IST
ಅಕ್ಷರ ಗಾತ್ರ

ತುರುವೇಕೆರೆ: ‘ಮುಖ್ಯ ಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಸರ್ಕಾರದ ಬಗ್ಗೆ ಸಚಿವ ಯೋಗೇಶ್ವರ್‌ಗೆ ಬೇಸರವಿದ್ದರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದು ಒಳಿತು’ ಎಂದು ಶಾಸಕ ಮಸಾಲ ಜಯರಾಂ ಖಾರವಾಗಿ ಪ್ರತಿಕ್ರಿಯಿಸಿದರು.

ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

‘ಯೋಗೇಶ್ವರ್ ಚಲನಚಿತ್ರ ನಟ. ಅವರು ತಮ್ಮ ಸಿನಿಮಾದಲ್ಲಿ ನಾಯಕರನ್ನು ಬದಲಿಸಿದಂತೆ ರಾಜ್ಯದ ಮುಖ್ಯಮಂತ್ರಿಯನ್ನು ಬದಲು ಮಾಡಬಹುದು ಅಂದುಕೊಂಡಿದ್ದರೆ ಅದು ನಡೆಯದು’ ಎಂದರು.

ಯಡಿಯೂರಪ್ಪರೊಂದಿಗೆ ಎಲ್ಲ ಸಚಿವರು, ಶಾಸಕರು ಹಾಗೂ ಪಕ್ಷದ ಎಲ್ಲ ಮುಖಂಡರು ಬೆನ್ನೆಲುಬಾಗಿ ಇದ್ದಾರೆ. ಬಿಜೆಪಿ ಎಂದರೆ ಯಡಿಯೂರಪ್ಪರು, ಹಾಗಾಗಿ ಹೈಕಮಾಂಡ್ ಯಡಿಯೂರಪ್ಪರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಲಾರದು ಎಂದರು.

ಯಡಿಯೂರಪ್ಪರು ಮಾಡಿರುವ ತಪ್ಪಾದರೂ ಏನು?.ಸಂಕಷ್ಟದಲ್ಲೂ ಪಕ್ಷ ಮತ್ತುಸರ್ಕಾರವನ್ನು ಅಬಾಧಿತವಾಗಿ ಮುನ್ನಡೆಸುತ್ತಿದ್ದಾರೆ. ಅವರ ಬೆನ್ನಿಗೆ ನಿಲ್ಲುವುದು ಪ್ರತಿಯೊಬ್ಬ ಬಿಜೆಪಿ ಶಾಸಕರ ಕರ್ತವ್ಯ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT