<p><strong>ತುರುವೇಕೆರೆ: </strong>‘ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರದ ಬಗ್ಗೆ ಸಚಿವ ಯೋಗೇಶ್ವರ್ಗೆ ಬೇಸರವಿದ್ದರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದು ಒಳಿತು’ ಎಂದು ಶಾಸಕ ಮಸಾಲ ಜಯರಾಂ ಖಾರವಾಗಿ ಪ್ರತಿಕ್ರಿಯಿಸಿದರು.</p>.<p>ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.</p>.<p>‘ಯೋಗೇಶ್ವರ್ ಚಲನಚಿತ್ರ ನಟ. ಅವರು ತಮ್ಮ ಸಿನಿಮಾದಲ್ಲಿ ನಾಯಕರನ್ನು ಬದಲಿಸಿದಂತೆ ರಾಜ್ಯದ ಮುಖ್ಯಮಂತ್ರಿಯನ್ನು ಬದಲು ಮಾಡಬಹುದು ಅಂದುಕೊಂಡಿದ್ದರೆ ಅದು ನಡೆಯದು’ ಎಂದರು.</p>.<p>ಯಡಿಯೂರಪ್ಪರೊಂದಿಗೆ ಎಲ್ಲ ಸಚಿವರು, ಶಾಸಕರು ಹಾಗೂ ಪಕ್ಷದ ಎಲ್ಲ ಮುಖಂಡರು ಬೆನ್ನೆಲುಬಾಗಿ ಇದ್ದಾರೆ. ಬಿಜೆಪಿ ಎಂದರೆ ಯಡಿಯೂರಪ್ಪರು, ಹಾಗಾಗಿ ಹೈಕಮಾಂಡ್ ಯಡಿಯೂರಪ್ಪರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಲಾರದು ಎಂದರು.</p>.<p>ಯಡಿಯೂರಪ್ಪರು ಮಾಡಿರುವ ತಪ್ಪಾದರೂ ಏನು?.ಸಂಕಷ್ಟದಲ್ಲೂ ಪಕ್ಷ ಮತ್ತುಸರ್ಕಾರವನ್ನು ಅಬಾಧಿತವಾಗಿ ಮುನ್ನಡೆಸುತ್ತಿದ್ದಾರೆ. ಅವರ ಬೆನ್ನಿಗೆ ನಿಲ್ಲುವುದು ಪ್ರತಿಯೊಬ್ಬ ಬಿಜೆಪಿ ಶಾಸಕರ ಕರ್ತವ್ಯ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುರುವೇಕೆರೆ: </strong>‘ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರದ ಬಗ್ಗೆ ಸಚಿವ ಯೋಗೇಶ್ವರ್ಗೆ ಬೇಸರವಿದ್ದರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದು ಒಳಿತು’ ಎಂದು ಶಾಸಕ ಮಸಾಲ ಜಯರಾಂ ಖಾರವಾಗಿ ಪ್ರತಿಕ್ರಿಯಿಸಿದರು.</p>.<p>ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.</p>.<p>‘ಯೋಗೇಶ್ವರ್ ಚಲನಚಿತ್ರ ನಟ. ಅವರು ತಮ್ಮ ಸಿನಿಮಾದಲ್ಲಿ ನಾಯಕರನ್ನು ಬದಲಿಸಿದಂತೆ ರಾಜ್ಯದ ಮುಖ್ಯಮಂತ್ರಿಯನ್ನು ಬದಲು ಮಾಡಬಹುದು ಅಂದುಕೊಂಡಿದ್ದರೆ ಅದು ನಡೆಯದು’ ಎಂದರು.</p>.<p>ಯಡಿಯೂರಪ್ಪರೊಂದಿಗೆ ಎಲ್ಲ ಸಚಿವರು, ಶಾಸಕರು ಹಾಗೂ ಪಕ್ಷದ ಎಲ್ಲ ಮುಖಂಡರು ಬೆನ್ನೆಲುಬಾಗಿ ಇದ್ದಾರೆ. ಬಿಜೆಪಿ ಎಂದರೆ ಯಡಿಯೂರಪ್ಪರು, ಹಾಗಾಗಿ ಹೈಕಮಾಂಡ್ ಯಡಿಯೂರಪ್ಪರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಲಾರದು ಎಂದರು.</p>.<p>ಯಡಿಯೂರಪ್ಪರು ಮಾಡಿರುವ ತಪ್ಪಾದರೂ ಏನು?.ಸಂಕಷ್ಟದಲ್ಲೂ ಪಕ್ಷ ಮತ್ತುಸರ್ಕಾರವನ್ನು ಅಬಾಧಿತವಾಗಿ ಮುನ್ನಡೆಸುತ್ತಿದ್ದಾರೆ. ಅವರ ಬೆನ್ನಿಗೆ ನಿಲ್ಲುವುದು ಪ್ರತಿಯೊಬ್ಬ ಬಿಜೆಪಿ ಶಾಸಕರ ಕರ್ತವ್ಯ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>