<p><strong>ತುಮಕೂರು: </strong>‘ಪ್ರತಿಯೊಬ್ಬರೂ ಪರಿಸರ ಕಾಳಜಿ ಮೆರೆಯಬೇಕು. ಅಮೂಲ್ಯವಾದ ಅರಣ್ಯ ಸಂಪತ್ತು ಸಂರಕ್ಷಣೆಗೆ ಪ್ರಾಮಾಣಿಕ ಪ್ರಯತ್ನ ಮಾಡಬೇಕು’ ಎಂದು ಸಿದ್ಧಗಂಗಾ ಎಂಜಿನಿಯರಿಂಗ್ ಕಾಲೇಜಿನ ನಿರ್ದೇಶಕ ಡಾ.ಎಂ.ಎನ್.ಚನ್ನಬಸಪ್ಪ ತಿಳಿಸಿದರು.</p>.<p>ರೋಟರಿ ತುಮಕೂರು ಸಿಟಿ ಘಟಕದ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಅತಿಥಿಯಾಗಿ ಮಾತನಾಡಿದರು.</p>.<p>‘ಮಳೆಯ ಪ್ರಮಾಣ ಕಡಿಮೆಯಾಗುತ್ತಿರುವುದರಿಂದ ಅಂತರ್ಜಲ ಕುಸಿತವಾಗಿದೆ. ಕುಡಿಯುವ ನೀರಿಗೂ ಪರಿತಪಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ಹೇಳಿದರು.</p>.<p>‘ಪರಿಸರ ನಾಶ, ಮಾಲಿನ್ಯದಿಂದ ಭೂಮಿಯಲ್ಲಿ ತಾಪಮಾನ ಏರಿಕೆಯಾಗುತ್ತಿದೆ. ಪರಿಸರ ಕಾಳಜಿ ಪ್ರಜ್ಞೆ ಮೂಡಿಸಬೇಕು. ಶಿಕ್ಷಣಕ್ಕೆ ಒತ್ತು ಕೊಡಬೇಕು’ ಎಂದರು.</p>.<p>ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧನೆ ಮಾಡಿದ ತುಮಕೂರು ರೋಟರಿ ಜಿಲ್ಲಾ ಗವರ್ನರ್ ಎಚ್.ಕೆ.ವಿ.ರೆಡ್ಡಿ, ‘ಪ್ರಾಮಾಣಿಕ ಸೇವೆಯೇ ಸಂಸ್ಥೆಯ ಮೂಲ ತತ್ವವಾಗಿದೆ. ಈ ವರ್ಷದ ರಾಷ್ಟ್ರಮಟ್ಟದಲ್ಲಿ ಕೋಟಿ ನಾಟಿ ಎಂಬ ಬೃಹತ್ ಪರಿಸರ ಯೋಜನೆ ಹಾಕಿಕೊಳ್ಳಲಾಗಿದೆ. ಸಾಧ್ಯವಿರುವ ಕಡೆಯಲ್ಲೆಲ್ಲ ಗಿಡಗಳನ್ನು ನೆಡುವ ಯೋಜನೆ ಇದಾಗಿದೆ’ ಎಂದು ಹೇಳಿದರು.</p>.<p>ನೂತನ ಅಧ್ಯಕ್ಷ ವಿ.ಎಸ್.ಕೆ.ಸ್ವಾಮಿ ಮಾತನಾಡಿ, ‘ರೋಟರಿ ಸಂಸ್ಥೆ 11ನೇ ವರ್ಷಕ್ಕೆ ಕಾಲಿಟ್ಟಿದೆ. ಸಂಸ್ಥೆಯ ಸೇವಾ ಗುರಿಯನ್ನು ಹೊಂದಿದ್ದು, ಮುಂದಿನ ದಿನಗಳಲ್ಲಿ ಹಲವಾರು ಜನಪರ ಕೆಲಸಗಳನ್ನು ಮಾಡುವ ಗುರಿ ಹಾಕಿಕೊಳ್ಳಲಾಗಿದೆ’ ಎಂದು ತಿಳಿಸಿದರು.</p>.<p>ಡಾ.ಎಂ.ಎನ್.ಚನ್ನಬಸಪ್ಪ ಅವರಿಗೆ ವಿಶೇಷ ಗೌರವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಸಿಗಳನ್ನು ನೆಡಲಾಯಿತು.</p>.<p>ರೋಟರಿ ಅಧ್ಯಕ್ಷ ವಿ.ಎಸ್.ಕೆ.ಸ್ವಾಮಿ, ಕಾರ್ಯದರ್ಶಿ ಜಯಪ್ಪ, ಪ್ರವೀಣ್ ಷಾ, ಸುರೇಂದ್ರ ಷಾ, ಕೆ.ಜಿ.ಶಿವಕುಮಾರ್, ಜಿ.ವಿ.ಸಚಿನ್, ಬಿ.ಆರ್.ರಮೇಶ್, ರವೀಶ್ಕುಮಾರ್ ಮತ್ತು ರೋಟರಿ ಎಲ್ಲಾ ಸದಸ್ಯರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>‘ಪ್ರತಿಯೊಬ್ಬರೂ ಪರಿಸರ ಕಾಳಜಿ ಮೆರೆಯಬೇಕು. ಅಮೂಲ್ಯವಾದ ಅರಣ್ಯ ಸಂಪತ್ತು ಸಂರಕ್ಷಣೆಗೆ ಪ್ರಾಮಾಣಿಕ ಪ್ರಯತ್ನ ಮಾಡಬೇಕು’ ಎಂದು ಸಿದ್ಧಗಂಗಾ ಎಂಜಿನಿಯರಿಂಗ್ ಕಾಲೇಜಿನ ನಿರ್ದೇಶಕ ಡಾ.ಎಂ.ಎನ್.ಚನ್ನಬಸಪ್ಪ ತಿಳಿಸಿದರು.</p>.<p>ರೋಟರಿ ತುಮಕೂರು ಸಿಟಿ ಘಟಕದ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಅತಿಥಿಯಾಗಿ ಮಾತನಾಡಿದರು.</p>.<p>‘ಮಳೆಯ ಪ್ರಮಾಣ ಕಡಿಮೆಯಾಗುತ್ತಿರುವುದರಿಂದ ಅಂತರ್ಜಲ ಕುಸಿತವಾಗಿದೆ. ಕುಡಿಯುವ ನೀರಿಗೂ ಪರಿತಪಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ಹೇಳಿದರು.</p>.<p>‘ಪರಿಸರ ನಾಶ, ಮಾಲಿನ್ಯದಿಂದ ಭೂಮಿಯಲ್ಲಿ ತಾಪಮಾನ ಏರಿಕೆಯಾಗುತ್ತಿದೆ. ಪರಿಸರ ಕಾಳಜಿ ಪ್ರಜ್ಞೆ ಮೂಡಿಸಬೇಕು. ಶಿಕ್ಷಣಕ್ಕೆ ಒತ್ತು ಕೊಡಬೇಕು’ ಎಂದರು.</p>.<p>ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧನೆ ಮಾಡಿದ ತುಮಕೂರು ರೋಟರಿ ಜಿಲ್ಲಾ ಗವರ್ನರ್ ಎಚ್.ಕೆ.ವಿ.ರೆಡ್ಡಿ, ‘ಪ್ರಾಮಾಣಿಕ ಸೇವೆಯೇ ಸಂಸ್ಥೆಯ ಮೂಲ ತತ್ವವಾಗಿದೆ. ಈ ವರ್ಷದ ರಾಷ್ಟ್ರಮಟ್ಟದಲ್ಲಿ ಕೋಟಿ ನಾಟಿ ಎಂಬ ಬೃಹತ್ ಪರಿಸರ ಯೋಜನೆ ಹಾಕಿಕೊಳ್ಳಲಾಗಿದೆ. ಸಾಧ್ಯವಿರುವ ಕಡೆಯಲ್ಲೆಲ್ಲ ಗಿಡಗಳನ್ನು ನೆಡುವ ಯೋಜನೆ ಇದಾಗಿದೆ’ ಎಂದು ಹೇಳಿದರು.</p>.<p>ನೂತನ ಅಧ್ಯಕ್ಷ ವಿ.ಎಸ್.ಕೆ.ಸ್ವಾಮಿ ಮಾತನಾಡಿ, ‘ರೋಟರಿ ಸಂಸ್ಥೆ 11ನೇ ವರ್ಷಕ್ಕೆ ಕಾಲಿಟ್ಟಿದೆ. ಸಂಸ್ಥೆಯ ಸೇವಾ ಗುರಿಯನ್ನು ಹೊಂದಿದ್ದು, ಮುಂದಿನ ದಿನಗಳಲ್ಲಿ ಹಲವಾರು ಜನಪರ ಕೆಲಸಗಳನ್ನು ಮಾಡುವ ಗುರಿ ಹಾಕಿಕೊಳ್ಳಲಾಗಿದೆ’ ಎಂದು ತಿಳಿಸಿದರು.</p>.<p>ಡಾ.ಎಂ.ಎನ್.ಚನ್ನಬಸಪ್ಪ ಅವರಿಗೆ ವಿಶೇಷ ಗೌರವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಸಿಗಳನ್ನು ನೆಡಲಾಯಿತು.</p>.<p>ರೋಟರಿ ಅಧ್ಯಕ್ಷ ವಿ.ಎಸ್.ಕೆ.ಸ್ವಾಮಿ, ಕಾರ್ಯದರ್ಶಿ ಜಯಪ್ಪ, ಪ್ರವೀಣ್ ಷಾ, ಸುರೇಂದ್ರ ಷಾ, ಕೆ.ಜಿ.ಶಿವಕುಮಾರ್, ಜಿ.ವಿ.ಸಚಿನ್, ಬಿ.ಆರ್.ರಮೇಶ್, ರವೀಶ್ಕುಮಾರ್ ಮತ್ತು ರೋಟರಿ ಎಲ್ಲಾ ಸದಸ್ಯರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>