<p><strong>ತುಮಕೂರು:</strong> ಭಾರತೀಯ ಜೀವ ವಿಮಾ ನಿಗಮ (ಎಲ್ಐಸಿ)ವನ್ನು ಖಾಸಗೀಕರಣಗೊಳ್ಳುತ್ತದೆ ಎಂಬುದು ಸುಳ್ಳು ವದಂತಿ. ಇದಕ್ಕೆ ಪಾಲಿಸಿದಾರರು ಕಿವಿಗೊಡಬಾರದು ಎಂದು ಎಲ್ಐಸಿ ಬೆಂಗಳೂರು ವಿಭಾಗ–1ರ ಹಿರಿಯ ವಿಭಾಗಾಧಿಕಾರಿ ಆಶೀಶ್ಕುಮಾರ್ ಹೇಳಿದರು.</p>.<p>ಕೇಂದ್ರದ ಹಣಕಾಸು ಸಚಿವರು ಎಲ್ಐಸಿಯ 100ರಷ್ಟು ಷೇರುಗಳಲ್ಲಿ ಶೇ 10ರಷ್ಟು ಷೇರುಗಳನ್ನು ಆಸಕ್ತರಿಗೆ ಮಾರಾಟ ಮಾಡಲಾಗುತ್ತದೆ ಎಂದು ಹೇಳಿದ್ದಾರಷ್ಟೇ. ಆದರೆ ಖಾಸಗೀಕರಣದ ಬಗ್ಗೆ ಸಚಿವರು ಮಾತನಾಡಿಲ್ಲ. ಯಾರು ಆತಂಕಪಡುವ ಅಗತ್ಯವಿಲ್ಲ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>ಎಲ್ಐಸಿ ಬೆಂಗಳೂರು ವಿಭಾಗ 1ರ ವ್ಯಾಪ್ತಿಯಲ್ಲಿ 20 ಶಾಖೆಗಳು ಮತ್ತು 10 ಉಪಶಾಖೆಗಳಿವೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ 1,48,703 ಪಾಲಿಸಿಗಳನ್ನು ಪೂರ್ಣಗೊಳಿಸಿ ₹518.10 ಕೋಟಿಯಷ್ಟು ಪ್ರೀಮಿಯಂ ಹಣ ಸಂಗ್ರಹಿಸಲಾಗಿದೆ. ತುಮಕೂರು ಜಿಲ್ಲಾ ವ್ಯಾಪ್ತಿಯ ಶಾಖೆಗಳಿಂದ 51,878 ಪಾಲಿಸಿಗಳನ್ನು ಪೂರ್ಣಗೊಳಿಸಿ ₹72.44 ಕೋಟಿಯಷ್ಟು ಪ್ರಥಮ ಪ್ರೀಮಿಯಂ ಹಣ ಸಂಗ್ರಹಿಸಲಾಗಿದೆ ಎಂದು ಹೇಳಿದರು.</p>.<p>ಕಳೆದ ವರ್ಷ ಭಾರತೀಯ ಜೀವ ವಿಮಾ ನಿಗಮ ₹53 ಸಾವಿರ ಕೋಟಿ ಲಾಭ ಗಳಿಸಿದೆ. ಅದರಲ್ಲಿ ಶೇ 95ರಷ್ಟು ಲಾಭವನ್ನು ನಿಗಮದ ಪಾಲಿಸಿದಾರರಿಗೆ ಬೋನಸ್ ರೂಪದಲ್ಲಿ ವಿತರಿಸಲಾಗಿದೆ. ನಿಗಮವು ಕೇಂದ್ರ ಸರ್ಕಾರದ ಸ್ವಾಮ್ಯದ ಸಂಸ್ಥೆಯಾಗಿರುವುದರಿಂದ ಶೇ 5ರಷ್ಟು ಅಂದರೆ ₹2,600 ಕೋಟಿ ಲಾಭದ ಮೊತ್ತವನ್ನು ಕೇಂದ್ರ ಸರ್ಕಾರಕ್ಕೆ ಚೆಕ್ ಮೂಲಕ ನೀಡಿದೆ ಎಂದು ತಿಳಿಸಿದರು.</p>.<p>ಈ ಬಾರಿಯ ಆರ್ಥಿಕ ವರ್ಷದಲ್ಲಿ ₹360 ಕೋಟಿಯಷ್ಟು ಗುರಿ ಹೊಂದಲಾಗಿತ್ತು. ಆದರೆ, ಆರ್ಥಿಕ ವರ್ಷ (ಮಾರ್ಚ್ 31)ಕ್ಕಿಂತ ಮುನ್ನವೇ ನಾವು ₹518.10 ಕೋಟಿಯಷ್ಟು ಪ್ರಥಮ ಪ್ರೀಮಿಯಂ ಹಣ ಸಂಗ್ರಹಿಸಿದ್ದೇವೆ. ಸುಳ್ಳು ವದಂತಿಗೆ ಕಿವಿಗೊಟ್ಟು ಯಾರೂ ಕೂಡ ಪಾಲಿಸಿ ಹಿಂಪಡೆದಿಲ್ಲ ಎಂದು ಮಾಹಿತಿ ನೀಡಿದರು.</p>.<p>ಗೋಷ್ಠಿಯಲ್ಲಿ ಬೆಂಗಳೂರು ವಿಭಾಗದ ಮಾರುಕಟ್ಟೆ ಪ್ರಬಂಧಕ ಮುರಳಿ ಮನೋಹರ್, ಮಾರುಕಟ್ಟೆ ವಿಭಾಗದ ಮುರಳೀಧರ್, ತುಮಕೂರಿನ ದಾಳಪ್ಪ ತಳವಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಭಾರತೀಯ ಜೀವ ವಿಮಾ ನಿಗಮ (ಎಲ್ಐಸಿ)ವನ್ನು ಖಾಸಗೀಕರಣಗೊಳ್ಳುತ್ತದೆ ಎಂಬುದು ಸುಳ್ಳು ವದಂತಿ. ಇದಕ್ಕೆ ಪಾಲಿಸಿದಾರರು ಕಿವಿಗೊಡಬಾರದು ಎಂದು ಎಲ್ಐಸಿ ಬೆಂಗಳೂರು ವಿಭಾಗ–1ರ ಹಿರಿಯ ವಿಭಾಗಾಧಿಕಾರಿ ಆಶೀಶ್ಕುಮಾರ್ ಹೇಳಿದರು.</p>.<p>ಕೇಂದ್ರದ ಹಣಕಾಸು ಸಚಿವರು ಎಲ್ಐಸಿಯ 100ರಷ್ಟು ಷೇರುಗಳಲ್ಲಿ ಶೇ 10ರಷ್ಟು ಷೇರುಗಳನ್ನು ಆಸಕ್ತರಿಗೆ ಮಾರಾಟ ಮಾಡಲಾಗುತ್ತದೆ ಎಂದು ಹೇಳಿದ್ದಾರಷ್ಟೇ. ಆದರೆ ಖಾಸಗೀಕರಣದ ಬಗ್ಗೆ ಸಚಿವರು ಮಾತನಾಡಿಲ್ಲ. ಯಾರು ಆತಂಕಪಡುವ ಅಗತ್ಯವಿಲ್ಲ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>ಎಲ್ಐಸಿ ಬೆಂಗಳೂರು ವಿಭಾಗ 1ರ ವ್ಯಾಪ್ತಿಯಲ್ಲಿ 20 ಶಾಖೆಗಳು ಮತ್ತು 10 ಉಪಶಾಖೆಗಳಿವೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ 1,48,703 ಪಾಲಿಸಿಗಳನ್ನು ಪೂರ್ಣಗೊಳಿಸಿ ₹518.10 ಕೋಟಿಯಷ್ಟು ಪ್ರೀಮಿಯಂ ಹಣ ಸಂಗ್ರಹಿಸಲಾಗಿದೆ. ತುಮಕೂರು ಜಿಲ್ಲಾ ವ್ಯಾಪ್ತಿಯ ಶಾಖೆಗಳಿಂದ 51,878 ಪಾಲಿಸಿಗಳನ್ನು ಪೂರ್ಣಗೊಳಿಸಿ ₹72.44 ಕೋಟಿಯಷ್ಟು ಪ್ರಥಮ ಪ್ರೀಮಿಯಂ ಹಣ ಸಂಗ್ರಹಿಸಲಾಗಿದೆ ಎಂದು ಹೇಳಿದರು.</p>.<p>ಕಳೆದ ವರ್ಷ ಭಾರತೀಯ ಜೀವ ವಿಮಾ ನಿಗಮ ₹53 ಸಾವಿರ ಕೋಟಿ ಲಾಭ ಗಳಿಸಿದೆ. ಅದರಲ್ಲಿ ಶೇ 95ರಷ್ಟು ಲಾಭವನ್ನು ನಿಗಮದ ಪಾಲಿಸಿದಾರರಿಗೆ ಬೋನಸ್ ರೂಪದಲ್ಲಿ ವಿತರಿಸಲಾಗಿದೆ. ನಿಗಮವು ಕೇಂದ್ರ ಸರ್ಕಾರದ ಸ್ವಾಮ್ಯದ ಸಂಸ್ಥೆಯಾಗಿರುವುದರಿಂದ ಶೇ 5ರಷ್ಟು ಅಂದರೆ ₹2,600 ಕೋಟಿ ಲಾಭದ ಮೊತ್ತವನ್ನು ಕೇಂದ್ರ ಸರ್ಕಾರಕ್ಕೆ ಚೆಕ್ ಮೂಲಕ ನೀಡಿದೆ ಎಂದು ತಿಳಿಸಿದರು.</p>.<p>ಈ ಬಾರಿಯ ಆರ್ಥಿಕ ವರ್ಷದಲ್ಲಿ ₹360 ಕೋಟಿಯಷ್ಟು ಗುರಿ ಹೊಂದಲಾಗಿತ್ತು. ಆದರೆ, ಆರ್ಥಿಕ ವರ್ಷ (ಮಾರ್ಚ್ 31)ಕ್ಕಿಂತ ಮುನ್ನವೇ ನಾವು ₹518.10 ಕೋಟಿಯಷ್ಟು ಪ್ರಥಮ ಪ್ರೀಮಿಯಂ ಹಣ ಸಂಗ್ರಹಿಸಿದ್ದೇವೆ. ಸುಳ್ಳು ವದಂತಿಗೆ ಕಿವಿಗೊಟ್ಟು ಯಾರೂ ಕೂಡ ಪಾಲಿಸಿ ಹಿಂಪಡೆದಿಲ್ಲ ಎಂದು ಮಾಹಿತಿ ನೀಡಿದರು.</p>.<p>ಗೋಷ್ಠಿಯಲ್ಲಿ ಬೆಂಗಳೂರು ವಿಭಾಗದ ಮಾರುಕಟ್ಟೆ ಪ್ರಬಂಧಕ ಮುರಳಿ ಮನೋಹರ್, ಮಾರುಕಟ್ಟೆ ವಿಭಾಗದ ಮುರಳೀಧರ್, ತುಮಕೂರಿನ ದಾಳಪ್ಪ ತಳವಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>