<p>ಗುಬ್ಬಿ: ಪಟ್ಟಣದಲ್ಲಿ ಲಯನ್ಸ್ ಕ್ಲಬ್ ಸರ್ವಿಸ್ ಟ್ರಸ್ಟ್ ಕಚೇರಿ ಉದ್ಘಾಟನೆ, ಉಚಿತ ನೂತನ ಮುಕ್ತಿವಾಹನ ಲೋಕಾರ್ಪಣೆ, ಸಾರ್ವಜನಿಕ ಉದ್ಯಾನ ಅಭಿವೃದ್ಧಿಗೆ ಸಚಿವ ವಿ. ಸೋಮಣ್ಣ ಭೂಮಿಪೂಜೆ ನೆರವೇರಿಸಿದರು.</p>.<p>ಸಚಿವ ವಿ. ಸೋಮಣ್ಣ ಮಾತನಾಡಿ, ತಾಲ್ಲೂಕಿನ ಎಲ್ಲ ರೈಲ್ವೆ ಗೇಟ್ಗಳ ಕಾಮಗಾರಿ ಪ್ರಾರಂಭವಾಗಿವೆ. ಹೆದ್ದಾರಿ ಕಾಮಗಾರಿ ನಡೆಯುತ್ತಿದೆ. ಪಟ್ಟಣಕ್ಕೆ ಅಗತ್ಯ ಸೌಕರ್ಯ ಒದಗಿಸಲು ಬದ್ಧ ಎಂದರು.</p>.<p>ಲಯನ್ಸ್ ಸಂಸ್ಥೆ ಜಿಲ್ಲಾ ಉಪ ರಾಜ್ಯಪಾಲ ಡಾ.ಜಿ.ಶಶಿಧರ್ ಗಂಜಿಗಟ್ಟಿ ಮಾತನಾಡಿ, ಸೇವೆಯನ್ನೇ ಗುರಿ ಹಾಕಿಸಿಕೊಂಡು ಲಯನ್ಸ್ ಸಂಸ್ಥೆ ಸಮಾಜಮುಖಿ ಕೆಲಸಗಳನ್ನು ನಿರಂತರವಾಗಿ ಮಾಡುತ್ತಿದೆ. ಸಮಾನ ಮನಸ್ಕರು ಲಯನ್ಸ್ ಸಂಸ್ಥೆಯಲ್ಲಿ ಇರುವುದರಿಂದ ಉತ್ತಮ ಸಾಮಾಜಿಕ ಕಾರ್ಯಗಳನ್ನು ಮಾಡಲು ಸಾಧ್ಯ ಎಂದು ಹೇಳಿದರು.</p>.<p>ಲಯನ್ಸ್ ಕ್ಲಬ್ ತಾಲ್ಲೂಕು ಘಟಕದ ಅಧ್ಯಕ್ಷ ಡಿ.ಎಸ್. ಕುಮಾರಸ್ವಾಮಿ ಮಾತನಾಡಿ, ತಾಲ್ಲೂಕಿನಲ್ಲಿ ಲಯನ್ಸ್ ಸಂಸ್ಥೆಯಿಂದ ನಾಲ್ಕು ದಶಕಗಳಿಂದ ನಿರಂತರವಾಗಿ ಸಾಮಾಜಿಕ, ಶೈಕ್ಷಣಿಕ, ಪರಿಸರ, ಆರೋಗ್ಯ ಸೇವೆಗಳನ್ನು ಮಾಡಿಕೊಂಡು ಬರಲಾಗುತ್ತಿದೆ ಎಂದರು.</p>.<p>ಶಾಸಕ ಎಸ್.ಆರ್. ಶ್ರೀನಿವಾಸ್, ಲಯನ್ಸ್ ಕ್ಲಬ್ ಅಧ್ಯಕ್ಷ ಕೆ.ಆರ್. ಅಶೋಕ್ ಕುಮಾರ್, ಪದಾಧಿಕಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗುಬ್ಬಿ: ಪಟ್ಟಣದಲ್ಲಿ ಲಯನ್ಸ್ ಕ್ಲಬ್ ಸರ್ವಿಸ್ ಟ್ರಸ್ಟ್ ಕಚೇರಿ ಉದ್ಘಾಟನೆ, ಉಚಿತ ನೂತನ ಮುಕ್ತಿವಾಹನ ಲೋಕಾರ್ಪಣೆ, ಸಾರ್ವಜನಿಕ ಉದ್ಯಾನ ಅಭಿವೃದ್ಧಿಗೆ ಸಚಿವ ವಿ. ಸೋಮಣ್ಣ ಭೂಮಿಪೂಜೆ ನೆರವೇರಿಸಿದರು.</p>.<p>ಸಚಿವ ವಿ. ಸೋಮಣ್ಣ ಮಾತನಾಡಿ, ತಾಲ್ಲೂಕಿನ ಎಲ್ಲ ರೈಲ್ವೆ ಗೇಟ್ಗಳ ಕಾಮಗಾರಿ ಪ್ರಾರಂಭವಾಗಿವೆ. ಹೆದ್ದಾರಿ ಕಾಮಗಾರಿ ನಡೆಯುತ್ತಿದೆ. ಪಟ್ಟಣಕ್ಕೆ ಅಗತ್ಯ ಸೌಕರ್ಯ ಒದಗಿಸಲು ಬದ್ಧ ಎಂದರು.</p>.<p>ಲಯನ್ಸ್ ಸಂಸ್ಥೆ ಜಿಲ್ಲಾ ಉಪ ರಾಜ್ಯಪಾಲ ಡಾ.ಜಿ.ಶಶಿಧರ್ ಗಂಜಿಗಟ್ಟಿ ಮಾತನಾಡಿ, ಸೇವೆಯನ್ನೇ ಗುರಿ ಹಾಕಿಸಿಕೊಂಡು ಲಯನ್ಸ್ ಸಂಸ್ಥೆ ಸಮಾಜಮುಖಿ ಕೆಲಸಗಳನ್ನು ನಿರಂತರವಾಗಿ ಮಾಡುತ್ತಿದೆ. ಸಮಾನ ಮನಸ್ಕರು ಲಯನ್ಸ್ ಸಂಸ್ಥೆಯಲ್ಲಿ ಇರುವುದರಿಂದ ಉತ್ತಮ ಸಾಮಾಜಿಕ ಕಾರ್ಯಗಳನ್ನು ಮಾಡಲು ಸಾಧ್ಯ ಎಂದು ಹೇಳಿದರು.</p>.<p>ಲಯನ್ಸ್ ಕ್ಲಬ್ ತಾಲ್ಲೂಕು ಘಟಕದ ಅಧ್ಯಕ್ಷ ಡಿ.ಎಸ್. ಕುಮಾರಸ್ವಾಮಿ ಮಾತನಾಡಿ, ತಾಲ್ಲೂಕಿನಲ್ಲಿ ಲಯನ್ಸ್ ಸಂಸ್ಥೆಯಿಂದ ನಾಲ್ಕು ದಶಕಗಳಿಂದ ನಿರಂತರವಾಗಿ ಸಾಮಾಜಿಕ, ಶೈಕ್ಷಣಿಕ, ಪರಿಸರ, ಆರೋಗ್ಯ ಸೇವೆಗಳನ್ನು ಮಾಡಿಕೊಂಡು ಬರಲಾಗುತ್ತಿದೆ ಎಂದರು.</p>.<p>ಶಾಸಕ ಎಸ್.ಆರ್. ಶ್ರೀನಿವಾಸ್, ಲಯನ್ಸ್ ಕ್ಲಬ್ ಅಧ್ಯಕ್ಷ ಕೆ.ಆರ್. ಅಶೋಕ್ ಕುಮಾರ್, ಪದಾಧಿಕಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>