‘ಯಾರಿಗೂ ದಿನಸಿ ನೀಡದೆ ವಾಪಸ್ ಕಳುಹಿಸಿಲ್ಲ. ಒಂದು ವೇಳೆ ಅಕ್ರಮವಾಗಿ ಮದ್ಯ ಮಾರಾಟ ಮಾಡಿದರೆ ಪ್ರಕರಣ ದಾಖಲಿಸಿ’ ಎಂದು ಅಂಗಡಿ ಮಾಲೀಕರು ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಮದ್ಯ ಮಾರಾಟ ಮಾಡುತ್ತಿದ್ದ ನರಸಿಂಹಮೂರ್ತಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಗ್ರಾಮದಲ್ಲಿ ಯಾವುದೇ ಗೊಂದಲ ಇಲ್ಲ. ಎಲ್ಲರೂ ಒಮ್ಮತದಿಂದ ಇದ್ದಾರೆ ಎಂದು ಪಿಎಸ್ಐ ಭವಿತಾ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.