ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿವೇಶನ; ಹೋರಾಟ ತೀವ್ರಗೊಳಿಸಲು ಕೊಳೆಗೇರಿ ಸಮಿತಿ ನಿರ್ಧಾರ

Last Updated 27 ಸೆಪ್ಟೆಂಬರ್ 2020, 16:21 IST
ಅಕ್ಷರ ಗಾತ್ರ

ತುಮಕೂರು: ನಗರದ ಕೊಳೆಗೇರಿಗಳಲ್ಲಿ ವಾಸಿಸುತ್ತಿರುವ ನಿವೇಶನ ರಹಿತರಿಗೆ ಸೂರು ಕಲ್ಪಿಸುವಂತೆ ಆಗ್ರಹಿಸಿ ಜಿಲ್ಲಾ ಕೊಳೆಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ಹೋರಾಟ ತೀವ್ರಗೊಳಿಸಲು ನಿರ್ಧರಿಸಿದೆ.

ನಗರ ವಂಚಿತ ಯುವಜನ ಸಂಪನ್ಮೂಲ ಕೇಂದ್ರದಲ್ಲಿ ನಡೆದ ಸಭೆಯಲ್ಲಿ, ನಿವೇಶನಕ್ಕಾಗಿ ಪ್ರತ್ಯೇಕ ಹೋರಾಟ ರೂಪಿಸಲು ಮುಖಂಡರು ನಿರ್ಣಯಕೈಗೊಂಡರು.

‘ನಮ್ಮ ಮನೆ ಹೋರಾಟ’ ಸಮಿತಿಯ ಹೋರಾಟದ ಫಲವಾಗಿ ಜಿಲ್ಲಾಧಿಕಾರಿ ಮತ್ತು ನಗರ ಶಾಸಕರು ಸರ್ಕಾರಿ ಭೂಮಿ ಗುರುತಿಸುವಂತೆ ತಹಶೀಲ್ದಾರ್ ಅವರಿಗೆ ನಿರ್ದೇಶನ ನೀಡಿದ್ದರು. ಹೊನ್ನೇನಹಳ್ಳಿ, ಪಿ.ಎನ್.ಆರ್.ಪಾಳ್ಯ ಮತ್ತು ಮರಳೇನಹಳ್ಳಿ ವಾರ್ಡ್‍ಗಳಲ್ಲಿ ಸರ್ಕಾರಿ ಭೂಮಿ ಹದ್ದುಬಸ್ತು ಕಾರ್ಯ ನಡೆಯುತ್ತಿದೆ. ಹೆಬ್ಬಾಕ ಮತ್ತು ಊರುಕೆರೆ ಸಮೀಪ ಸರ್ಕಾರದಿಂದ ವಸತಿ ಸಮುಚ್ಛಯ ನಿರ್ಮಾಣಕ್ಕೆ ಸಿದ್ಧತೆ ಕೈಗೊಳ್ಳಲಾಗಿದೆ. ಇಲ್ಲಿ 2016-17ರಲ್ಲಿ ನಿವೇಶನಕ್ಕೆ ಅರ್ಜಿ ಸಲ್ಲಿಸಿರುವ ಕುಟುಂಬಗಳಿಗೆ ನಿವೇಶನ ಹಂಚಿಕೆ ಆಗುತ್ತದೆ ಎಂದು ಸಮಿತಿ ಮುಖಂಡರು ಸಭೆಗೆ ವಿವರಿಸಿದರು.

ನಿವೇಶನರಹಿತರ ಬಗ್ಗೆ ಪಾಲಿಕೆ ಕಂದಾಯ ಅಧಿಕಾರಿಗಳು ಸಮೀಕ್ಷೆ ನಡೆಸುತ್ತಿದ್ದಾರೆ. ಸಮೀಕ್ಷೆ ನೆಪದಲ್ಲಿ ಮಧ್ಯವರ್ತಿಗಳು ಹಣ ವಸೂಲಿ ಮಾಡುತ್ತಿದ್ದಾರೆ. ಈ ಬಗ್ಗೆ ಜಾಗೃತಿ ಕೈಗೊಳ್ಳಬೇಕು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು. ಜಿಲ್ಲೆಯಲ್ಲಿ ಇದುವರೆಗೂ ಘೋಷಣೆ ಆಗಿರುವ ಎಲ್ಲ ಕೊಳೆಗೇರಿಗಳ ಜನರಿಗೆ ಹಕ್ಕುಪತ್ರ ನೀಡಲು ಜಿಲ್ಲಾಡಳಿತ ಕ್ರಮವಹಿಬೇಕು ಎಂದು ಒತ್ತಾಯಿಸಲಾಯಿತು.

ದೀಪಿಕಾ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಮಿತಿ ಪದಾಧಿಕಾರಿಗಳಾದ ಎ.ನರಸಿಂಹಮೂರ್ತಿ, ಅರುಣ್, ರಂಗನಾಥ್, ಶಂಕರಯ್ಯ, ಹಯತ್‍ಸಾಬ್, ತಿರುಮಲಯ್ಯ, ಮಂಗಳಮ್ಮ, ಕೆಂಪಣ್ಣ, ಶಾಬುದ್ದೀನ್, ದನಂಜಯ, ಗಂಗಮ್ಮ, ಕೃಷ್ಣ, ಮುರುಗ ಸಭೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT