ನಗರದ ಶಿವಕುಮಾರ ಸ್ವಾಮೀಜಿ ವೃತ್ತ, ಕಾಂಗ್ರೆಸ್ ಕಚೇರಿ ಎದುರು, ಟೌನ್ಹಾಲ್, ಕಾಲ್ಟೆಕ್ಸ್, ಗುಬ್ಬಿಗೇಟ್, ಕೋತಿತೋಪು ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಅಳವಡಿಸಿದ್ದ ಬ್ಯಾರಿಕೇಡ್ಗಳನ್ನು ಪೊಲೀಸರು ತೆರವುಗೊಳಿಸಿದ್ದರು. ಬೆಳಿಗ್ಗೆಯಿಂದಲೇ ರಸ್ತೆಗಳಲ್ಲಿ ಹೆಚ್ಚಿನ ಜನರ ಓಡಾಟ ಇತ್ತು. ಬಾಗಿಲು ಮುಚ್ಚಿದ್ದ ನಗರದ ಬಹುತೇಕ ಖಾಸಗಿ ಆಸ್ಪತ್ರೆಗಳು ತೆರೆದಿದ್ದವು.