‘ನಗರದಲ್ಲಿ ಅಟೋ ಓಡಿಸಿ ಅದರಿಂದ ಬರುವ ಬಾಡಿಗೆ ಹಣದಲ್ಲಿ ಜೀವನ ನಿರ್ವಹಣೆ ಮಾಡುತ್ತಿದ್ದ ಚಾಲಕರು ಲಾಕ್ಡೌನ್ನಿಂದಾಗಿ ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಆಟೋ ಚಾಲಕರೂ ಸೇರಿದಂತೆ ಅಸಂಘಟಿತ ಕಾರ್ಮಿಕರ ಬದುಕು ದುಸ್ತರವಾಗಿದೆ. ಇಂತಹವರ ಸಂಕಷ್ಟಕ್ಕೆ ಸರ್ಕಾರ ನೆರವಾಗಬೇಕು, ಕೊರೊನಾದ ಆತಂಕ ನಿವಾರಣೆ ಆಗುವವರೆಗೂ ಸರ್ಕಾರ ಆಟೋ ಚಾಲಕರ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು ಹಣ ಹಾಕಬೇಕು.ಆಟೋ ಸಾಲದ ಬಡ್ಡಿ ಮನ್ನಾ ಮಾಡಬೇಕು’ ಎಂದು ಕಾರ್ಮಿಕ ಮುಖಂಡ ಬಿ. ಉಮೇಶ್ ಒತ್ತಾಯಿಸುತ್ತಾರೆ.