<p><strong>ತುಮಕೂರು</strong>: ಜಿಲ್ಲೆಯಲ್ಲಿ ಫೆ. 11ರಂದು ನಡೆದ ಲೋಕ ಅದಾಲತ್ನಲ್ಲಿ ಒಟ್ಟು 1,55,144 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಗೀತಾ ಮಂಗಳವಾರ ಹೇಳಿದರು.</p>.<p>ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇದ್ದ 89,447 ಪ್ರಕರಣಗಳಲ್ಲಿ 16,188 ಪ್ರಕರಣ ಹಾಗೂ ಪೂರ್ವ ವ್ಯಾಜ್ಯ ಪ್ರಕರಣಗಳು ಸೇರಿ ಒಟ್ಟು 1,55,144 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ. ರಾಜ್ಯವು ಈ ಹಿಂದಿನ ಲೋಕ ಅದಾಲತ್ಗಳಲ್ಲಿ ಹೆಚ್ಚಿನ ಪ್ರಕರಣ ವಿಲೇವಾರಿ ಮಾಡಿ, ರಾಷ್ಟ್ರ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಜುಲೈ 8ರಂದು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಲೋಕ ಅದಾಲತ್ ಏರ್ಪಡಿಸಲಾಗಿದೆ. ಜನ ಸಾಮಾನ್ಯರಿಗೆ ತ್ವರಿತವಾಗಿ, ವೆಚ್ಚವಿಲ್ಲದೆ ರಾಜಿ ಸಂಧಾನದ ಮೂಲಕ ವ್ಯಾಜ್ಯ ಇತ್ಯರ್ಥಗೊಳಿಸಲಾಗುತ್ತದೆ ಎಂದು ಹೇಳಿದರು.</p>.<p>ಚೆಕ್ಕು ಅಮಾನ್ಯ, ಬ್ಯಾಂಕ್ ವಸೂಲಾತಿ, ಕಾರ್ಮಿಕರ ವಿವಾದ, ವಿದ್ಯುತ್, ನೀರಿನ ಶುಲ್ಕ ಹಾಗೂ ರಾಜಿಯಾಗಬಲ್ಲ, ವೈವಾಹಿಕ ಹಾಗೂ ಸಿವಿಲ್ ಪ್ರಕರಣಗಳು; ನ್ಯಾಯಾಲಯದಲ್ಲಿ ಬಾಕಿ ಇರುವ ಜಿಲ್ಲಾ ಗ್ರಾಹಕರ ಪರಿಹಾರ ಆಯೋಗದಲ್ಲಿನ ಪ್ರಕರಣಗಳು, ವೈವಾಹಿಕ, ಕುಟುಂಬ ನ್ಯಾಯಾಲಯ (ವಿಚ್ಛೇದನ ಹೊರತುಪಡಿಸಿ), ಮೋಟಾರು ಅಪಘಾತ ಪರಿಹಾರ, ಭೂ ಸ್ವಾಧೀನ ಪ್ರಕರಣ ಹಾಗೂ ಸಿವಿಲ್ ಪ್ರಕರಣ; ಕಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗುವುದು ಎಂದು ಮಾಹಿತಿ ನೀಡಿದರು.</p>.<p>ಮಾಹಿತಿಗೆ ಜಿಲ್ಲಾ ಕಾನೂನು ಸೇವಾ ಸಮಿತಿಯ ಈ ಮೇಲ್ ವಿಳಾಸ dlsatumkur1@gmail.com ಹಾಗೂ ಸದಸ್ಯ ಕಾರ್ಯದರ್ಶಿ ಕಚೇರಿ ದೂರವಾಣಿ 0816-2255133, ಮೊ 9141193959 ಸಂಪರ್ಕಿಸಿ ಖುದ್ದು ಹಾಜರಾಗುವ ಮೂಲಕ ಪ್ರಕರಣ ಇತ್ಯರ್ಥ ಪಡಿಸಿಕೊಳ್ಳಬಹುದು ಎಂದು ತಿಳಿಸಿದರು.</p>.<p>ಜಿಲ್ಲಾ ಕಾನೂನು ಸೇವೆ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಜಿಲ್ಲೆಯಲ್ಲಿ ಫೆ. 11ರಂದು ನಡೆದ ಲೋಕ ಅದಾಲತ್ನಲ್ಲಿ ಒಟ್ಟು 1,55,144 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಗೀತಾ ಮಂಗಳವಾರ ಹೇಳಿದರು.</p>.<p>ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇದ್ದ 89,447 ಪ್ರಕರಣಗಳಲ್ಲಿ 16,188 ಪ್ರಕರಣ ಹಾಗೂ ಪೂರ್ವ ವ್ಯಾಜ್ಯ ಪ್ರಕರಣಗಳು ಸೇರಿ ಒಟ್ಟು 1,55,144 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ. ರಾಜ್ಯವು ಈ ಹಿಂದಿನ ಲೋಕ ಅದಾಲತ್ಗಳಲ್ಲಿ ಹೆಚ್ಚಿನ ಪ್ರಕರಣ ವಿಲೇವಾರಿ ಮಾಡಿ, ರಾಷ್ಟ್ರ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಜುಲೈ 8ರಂದು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಲೋಕ ಅದಾಲತ್ ಏರ್ಪಡಿಸಲಾಗಿದೆ. ಜನ ಸಾಮಾನ್ಯರಿಗೆ ತ್ವರಿತವಾಗಿ, ವೆಚ್ಚವಿಲ್ಲದೆ ರಾಜಿ ಸಂಧಾನದ ಮೂಲಕ ವ್ಯಾಜ್ಯ ಇತ್ಯರ್ಥಗೊಳಿಸಲಾಗುತ್ತದೆ ಎಂದು ಹೇಳಿದರು.</p>.<p>ಚೆಕ್ಕು ಅಮಾನ್ಯ, ಬ್ಯಾಂಕ್ ವಸೂಲಾತಿ, ಕಾರ್ಮಿಕರ ವಿವಾದ, ವಿದ್ಯುತ್, ನೀರಿನ ಶುಲ್ಕ ಹಾಗೂ ರಾಜಿಯಾಗಬಲ್ಲ, ವೈವಾಹಿಕ ಹಾಗೂ ಸಿವಿಲ್ ಪ್ರಕರಣಗಳು; ನ್ಯಾಯಾಲಯದಲ್ಲಿ ಬಾಕಿ ಇರುವ ಜಿಲ್ಲಾ ಗ್ರಾಹಕರ ಪರಿಹಾರ ಆಯೋಗದಲ್ಲಿನ ಪ್ರಕರಣಗಳು, ವೈವಾಹಿಕ, ಕುಟುಂಬ ನ್ಯಾಯಾಲಯ (ವಿಚ್ಛೇದನ ಹೊರತುಪಡಿಸಿ), ಮೋಟಾರು ಅಪಘಾತ ಪರಿಹಾರ, ಭೂ ಸ್ವಾಧೀನ ಪ್ರಕರಣ ಹಾಗೂ ಸಿವಿಲ್ ಪ್ರಕರಣ; ಕಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗುವುದು ಎಂದು ಮಾಹಿತಿ ನೀಡಿದರು.</p>.<p>ಮಾಹಿತಿಗೆ ಜಿಲ್ಲಾ ಕಾನೂನು ಸೇವಾ ಸಮಿತಿಯ ಈ ಮೇಲ್ ವಿಳಾಸ dlsatumkur1@gmail.com ಹಾಗೂ ಸದಸ್ಯ ಕಾರ್ಯದರ್ಶಿ ಕಚೇರಿ ದೂರವಾಣಿ 0816-2255133, ಮೊ 9141193959 ಸಂಪರ್ಕಿಸಿ ಖುದ್ದು ಹಾಜರಾಗುವ ಮೂಲಕ ಪ್ರಕರಣ ಇತ್ಯರ್ಥ ಪಡಿಸಿಕೊಳ್ಳಬಹುದು ಎಂದು ತಿಳಿಸಿದರು.</p>.<p>ಜಿಲ್ಲಾ ಕಾನೂನು ಸೇವೆ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>